
ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ರೈತ ಸಂಘಟನೆಗಳೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದರು
Pre-Budget Meeting | ರೈತರ ಬೇಡಿಕೆಗೆ ಪ್ರಥಮ ಆದ್ಯತೆ: ಸಿ.ಎಂ.ಸಿದ್ದರಾಮಯ್ಯ ಭರವಸೆ
ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ನಾನು ಸದಾ ರೈತರ ಪರವಾಗಿಯೇ ಇರುತ್ತೇನೆ ಎಂದು ಸಿಎಂ ಸಿದ್ದರಾಂಯ್ಯ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಉದ್ಯೋಗ ಅವಲಂಬನೆ ಕೃಷಿಯಲ್ಲಿದೆ. ಹಾಗಾಗಿ ರೈತರ ಬೇಡಿಕೆಗಳಿಗೆ ಸರ್ಕಾರ ಪ್ರಥಮ ಆದ್ಯತೆ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ರೈತ ಸಂಘದ ಮುಖಂಡರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ರೈತರ ಬೇಡಿಕೆಗಳನ್ನು ನಿರಂತರವಾಗಿ, ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ನಾನು ಸದಾ ರೈತರ ಪರವಾಗಿಯೇ ಇರುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇದೇ ವೇಳೆ ವಿವಿಧ ರೈತ ಸಂಘಗಳ ಪ್ರತಿನಿಧಿಗಳು ಮುಖ್ಯಮಂತ್ರಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿಡುವಂತೆ ಮನವಿ ಮಾಡಿ
ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರವನ್ನು ಒಕ್ಕೊರಲಿನಿಂದ ಅಭಿನಂದಿಸಿದ್ದಾರೆ.
Next Story