ಸಿದ್ರಾಮುಲ್ಲಾಖಾನ್ ಎಂದು ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಎಫ್‌ಐಆರ್
x

'ಸಿದ್ರಾಮುಲ್ಲಾಖಾನ್' ಎಂದು ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಎಫ್‌ಐಆರ್

ಈ ಸ್ಟೇಟಸ್ ಅನ್ನು ಗಮನಿಸಿದ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಅವರು ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.


ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಮಾನಿಸುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಹಾಕಿಕೊಂಡ ಆರೋಪದ ಮೇಲೆ, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರವೀಣಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಗಸ್ಟ್ 21 ರಂದು, ಪಿಡಿಒ ಪ್ರವೀಣಕುಮಾರ್ ಅವರು ತಮ್ಮ ಮೊಬೈಲ್‌ನಲ್ಲಿ, ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿಗೆಯನ್ನು ಎಡಿಟ್ ಮಾಡಿ ಹಾಕಿರುವ ಚಿತ್ರದ ಜೊತೆಗೆ "ಸಿದ್ರಾಮುಲ್ಲಾಖಾನ್" ಎಂಬ ಬರಹವನ್ನು ವಾಟ್ಸ್​​ಆ್ಯಪ್​ ಸ್ಟೇಟಸ್ ಆಗಿ ಇಟ್ಟುಕೊಂಡಿದ್ದರು.

ಈ ಸ್ಟೇಟಸ್ ಅನ್ನು ಗಮನಿಸಿದ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಅವರು ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಗ್ರಾಮದ ಮತ್ತೊಬ್ಬ ಮುಖಂಡ ಮಹಾಲಿಂಗಪ್ಪ ಹರವಾಳ ಮತ್ತು ಆಳಂದ ತಾಲೂಕು ಕುರುಬರ ಸಂಘದ ಯುವ ಘಟಕದ ಅಧ್ಯಕ್ಷ ಬೀರಣ್ಣಾ ಪೂಜಾರಿ ಅವರು, ಪಿಡಿಒ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಪಂಚಾಯಿತಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ಪೊಲೀಸ್ ಮತ್ತು ಇಲಾಖಾ ಕ್ರಮ

ದೂರಿನ ಅನ್ವಯ, ನಿಂಬರ್ಗಾ ಠಾಣೆಯ ಪೊಲೀಸರು ಪ್ರವೀಣಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. "ಪಿಡಿಒ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ಮತ್ತು ಗ್ರಾಮಸ್ಥರು ನೀಡಿದ ದೂರಿನ ಕುರಿತು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಅವರ ಗಮನಕ್ಕೆ ತರಲಾಗಿದೆ. ಮುಂದಿನ ಕ್ರಮಕ್ಕಾಗಿ ವರದಿಯನ್ನು ಸಲ್ಲಿಸಿದ್ದೇನೆ" ಎಂದು ಆಳಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು 'ಪ್ರಜಾವಾಣಿ'ಗೆ ಮಾಹಿತಿ ನೀಡಿದ್ದಾರೆ.

Read More
Next Story