Karnataka Assembly live:ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ
x
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಸಚಿವ ಹೆಚ್‌.ಕೆ ಪಾಟೀಲ್‌

Karnataka Assembly live:ವಿಧಾನಸಭೆ ಕಲಾಪ ನಾಳೆಗೆ ಮುಂದೂಡಿಕೆ

ಕೇಂದ್ರ ಸರ್ಕಾರವು ನರೇಗಾ (MGNREGA) ಯೋಜನೆಯನ್ನು ರದ್ದುಗೊಳಿಸಿ 'ವಿಬಿ ಜಿ ರಾಮ್ ಜಿ' ಎಂಬ ಹೊಸ ಕಾಯ್ದೆ ಜಾರಿಗೆ ತಂದಿರುವುದನ್ನು ವಿರೋಧಿಸಲು ಕರೆದಿರುವ ವಿಶೇಷ ಜಂಟಿ ಅಧಿವೇಶನವು ಇಂದು ನಡೆಯುತ್ತಿದೆ.


ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡುವಿನ ಸಂಘರ್ಷ ಹೊಸ ತಿರುವು ಪಡೆದುಕೊಂಡಿದೆ. ರಾಜ್ಯ ಸರ್ಕಾರದ ಅಧಿಕೃತ ಆಹ್ವಾನದಂತೆ ಜಂಟಿ ಅಧಿವೇಶನಕ್ಕೆ ಬಂದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋತ್‌ ಅವರನ್ನು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್‌ ಯು.ಟಿ.ಖಾದರ್‌ ಹಾಗೂ ಸಚಿವರು ಬರ ಮಾಡಿಕೊಂಡರು. ಆದರೆ, ರಾಜ್ಯಪಾಲರು ಭಾಷಣದ ಮೊದಲ ಹಾಗೂ ಕೊನೆಯ ಪ್ಯಾರಾವನ್ನಷ್ಟೇ ಓದಿ ಹೊರ ನಡೆದದ್ದು ಆಡಳಿತ ಪಕ್ಷವನ್ನು ಮುಜುಗರಕ್ಕೀಡು ಮಾಡಿತಲ್ಲದೇ ಆಕ್ರೋಶಕ್ಕೂ ಕಾರಣವಾಯಿತು.

ಆಡಳಿತ ಪಕ್ಷದ ಸದಸ್ಯರ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ಮಾರ್ಷಲ್‌ಗಳ ಭದ್ರತೆಯಲ್ಲಿ ರಾಜ್ಯಪಾಲರು ಅಧಿವೇಶನದಿಂದ ಹೊರನಡೆದರು. ವಿರೋಧ ಪಕ್ಷಗಳ ಸದಸ್ಯರು ಕೂಡ ಜಂಟಿ ಅಧಿವೇಶನದಿಂದ ಹೊರ ನಡೆದರು. ರಾಜ್ಯಪಾಲರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಭಾಷಣದ ಮೊದಲ, ಕೊನೆ ಪ್ಯಾರಾ ಓದಿದ ಗೆಹ್ಲೋಟ್‌

ಅಧಿವೇಶನಕ್ಕೆ ಬಂದ ರಾಜ್ಯಪಾಲರು ಕೆಲ ಸೆಕೆಂಡುಗಳಲ್ಲೇ ಭಾಷಣದ ಮೊದಲ ಹಾಗೂ ಕೊನೆಯ ಪ್ಯಾರಾ ಓದಿ ಹೊರನಡೆದರು. ಸರ್ಕಾರದ ಭಾಷಣದ 11ನೇ ಪ್ಯಾರಾದಲ್ಲಿರುವ 'ಜಿ ರಾಮ್ ಜಿ' (G RAM G) ಯೋಜನೆ ಕುರಿತು ರಾಜ್ಯಪಾಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಭಾಗವನ್ನು ಓದಬಾರದೆಂದು ನಿರ್ಧರಿಸಿದ್ದರು. ಇದಕ್ಕೂ ಮುನ್ನ ಸರ್ಕಾರದ ಪರವಾಗಿ ಎ.ಎಸ್. ಪೊನ್ನಣ್ಣ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಮನವೊಲಿಸಲು ಯತ್ನಿಸಿದರೂ, ಆಕ್ಷೇಪಿತ ಸಾಲುಗಳನ್ನು ತೆಗೆಯದಿರಲು ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದರು.

11ನೇ ಪ್ಯಾರಾದಲ್ಲೇನಿದೆ?

ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಭಾಷಣದ ಸಂಘರ್ಷದ ಕುರಿತು ಕಾನೂನು ಸಚಿವ ಎಚ್.ಕೆ. ಪಾಟೀಲ್ ಪ್ರತಿಕ್ರಿಯಿಸಿದ್ದು, ಭಾಷಣದ 11ನೇ ಪ್ಯಾರಾದಲ್ಲಿನ 'ಜಿ ರಾಮ್ ಜಿ' ಯೋಜನೆ ಮಾತ್ರವಲ್ಲದೆ, ಕೇಂದ್ರದ ನಿಲುವು, ರಾಜ್ಯಕ್ಕಾದ ಅನ್ಯಾಯ ಹಾಗೂ ಆಗಬೇಕಿರುವ ಕೆಲಸಗಳ ಕುರಿತೂ ಉಲ್ಲೇಖಗಳಿವೆ. ಇಂತಹ ನೂರು ಪ್ಯಾರಾಗಳು ಭಾಷಣದಲ್ಲಿ ಇರಬಹುದು ಎಂದು ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.

Live Updates

Read More
Next Story