
ಭಾರೀ ಮಳೆ
Karnataka Rains| 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಳ್ಳಲಿದ್ದು, ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ ತಿಂಗಳ ಅಂತ್ಯದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಹಲವು ಅನಾಹುತ ಸಂಭವಿಸಿತ್ತು. ವಾರಕ್ಕೂ ಮುನ್ನವೇ ಮುಂಗಾರು ಪ್ರವೇಶ ಆಗಿದ್ದು, ಇದೀಗ ಮತ್ತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಿಗೆ ಅಲರ್ಟ್
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗಲಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ಉಪ್ಪಿನಂಗಡಿ, ಗೋಕರ್ಣ, ಸಿದ್ದಾಪುರ, ಮಾಣಿ, ಭಾಗಮಂಡಲ, ಕೊಟ್ಟಿಗೆಹಾರ, ತ್ಯಾಗರ್ತಿ, ಜಯಪುರ, ಗೇರುಸೊಪ್ಪ, ಮುಲ್ಕಿ, ಕುಮಟಾ, ಮಂಗಳೂರು, ಬಂಟವಾಳ, ಕ್ಯಾಸಲ್ರಾಕ್, ಮೂಡುಬಿದಿರೆ, ಬಂಟವಾಳ, ಹೊನ್ನಾವರ, ಬೆಳ್ತಂಗಡಿ, ಆಗುಂಬೆ, ರಾಯಲ್ಪಾಡು, ಶೃಂಗೇರಿ, ಕಮ್ಮರಡಿ, ನಾಪೋಕ್ಲು, ಅಜ್ಜಂಪುರ, ಸೋಮವಾರಪೇಟೆ, ತರೀಕೆರೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲೂ ಇಂದು ಮಳೆ
ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಇತ್ತ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ.