
Heavy Weather| ರಾಜ್ಯದಲ್ಲಿ ಜುಲೈ 3ರವರೆಗೆ ಭಾರೀ ಮಳೆ; ಕೊಡಗು ಜಿಲ್ಲೆಗೆ ರೆಡ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ಪ್ರವಾಹ ಸ್ಥಿತಿ ಉಂಟಾಗಿದ್ದು ಶನಿವಾರ ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ರಾಜ್ಯದಲ್ಲಿ ಜುಲೈ 3ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗ ಸೇರಿದಂತೆ ಕೆಲ ಜಿಲ್ಲೆಗಳಿಗೆ ರೆಡ್ ಹಾಗೂ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಸಹ ಕೆಲವೆಡೆ ಮಳೆಯಾಗಲಿದ್ದು, ಶಾಲೆ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗಿಗೆ ರೆಡ್ ಅಲರ್ಟ್, ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ಪ್ರವಾಹ ಸ್ಥಿತಿ ಉಂಟಾಗಿದ್ದು ಶನಿವಾರ ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿಯುವ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜಿಗೆ ಶನಿವಾರ ರಜೆ ಘೋಷಣೆ ಮಾಡಲಾಗಿದೆ.
5 ದಿನಗಳ ಕಾಲ ಭಾರೀ ಮಳೆ
ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಭಾಗಕ್ಕೆ ಭಾರೀ ಮಳೆ ಅಲರ್ಟ್ ನೀಡಲಾಗಿದೆ. ಮುಂಗಾರು ಚುರುಕಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಿಗೆ ಆರೆಂಜ್ ನೀಡಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ಧಾರವಾಡ, ವಿಜಯಪುರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತವರಣವಿದ್ದು, ಮಧ್ಯಾಹ್ನದ ವೇಳೆ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜಲಾಶಯಗಳು ಭರ್ತಿ
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಿಂದಾಗಿ ಕೆ.ಆರ್.ಎಸ್ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣ 51,000 ಕ್ಯೂಸೆಕ್ಗೆ ಏರಿದ್ದು, ಜಲಾಶಯದ ನೀರಿನ ಮಟ್ಟ 121 ಅಡಿಯನ್ನು ದಾಟಿದೆ, ಇದು 124.80 ಅಡಿಯ ಗರಿಷ್ಠ ಸಾಮರ್ಥ್ಯಕ್ಕೆ ಕೇವಲ 3 ಅಡಿ ಬಾಕಿಯಿದೆ.
ಶ್ರೀರಂಗಪಟ್ಟಣದ ಬಳಿಯ ಸ್ನಾನಘಟ್ಟ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ನಿಮಿಷಾಂಭ ದೇಗುಲದ ಬಳಿಯ ಸ್ನಾನಘಟ್ಟ ಮತ್ತು ಭಕ್ತರ ಸ್ನಾನಗೃಹವೂ ಮುಳುಗಡೆಯಾಗಿದೆ. ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ರೈತರ ಜಮೀನುಗಳು ಮುಳುಗಡೆಯಾಗಿವೆ.
ಕಾವೇರಿ ನೀರಾವರಿ ನಿಗಮವು ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಸುರಕ್ಷಿತ ಸ್ಥಳಗಳಿಗೆ ತೆರಳಲು ಮತ್ತು ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.