
ಡಿ. ಕೆ ಶಿವಕುಮಾರ್
ಕಾವೇರಿ ಆರತಿಗೆ ಹೈಕೋರ್ಟ್ ನೋಟಿಸ್ ; ಕಾನೂನು ಮೂಲಕವೇ ಉತ್ತರ ಎಂದ ಡಿ.ಕೆ. ಶಿವಕುಮಾರ್
ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಕೇಳಿದಾಗ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ಛೇಡಿಸಿದರು.
ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೊಟೀಸ್ ನೀಡಿದೆ. ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.
ಅಶೋಕ್ ಬಳಿ ನಾನು ಹೋಗಿ ಭವಿಷ್ಯ ಕೇಳುವೆ
ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆ ಬಗ್ಗೆ ಕೇಳಿದಾಗ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ಛೇಡಿಸಿದರು.
ಸುರ್ಜೆವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡುವರೇ ಎಂದು ಕೇಳಿದಾಗ, "ಹೌದು, ಅವರು ಶಾಸಕರ ಜೊತೆ ಖುದ್ದಾಗಿ ಭೇಟಿ ಮಾಡಲಿದ್ದಾರೆ. ಈ ಬಗ್ಗೆ ಅವರೇ ಶಾಸಕರಿಗೆ ತಿಳಿಸಿದ್ದಾರೆ. ನಾನು ಕೂಡ ಶಾಸಕರಿಗೆ ಮಾಹಿತಿ ನೀಡುತ್ತೇನೆ" ಎಂದು ತಿಳಿಸಿದರು.