ಕೆಎಸ್‌ಸಿಎ, ಪೊಲೀಸ್ ಕಮಿಷನರ್‌ಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ಜಾರಿ
x

ಮಾನವ ಹಕ್ಕುಗಳ ಆಯೋಗ 

ಕೆಎಸ್‌ಸಿಎ, ಪೊಲೀಸ್ ಕಮಿಷನರ್‌ಗೆ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್ ಜಾರಿ

ಸುಮೊಟೋ ಕೇಸ್ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದು, ಕೇವಲ KSCA ಆಡಳಿತ ಮಂಡಳಿ ಮಾತ್ರವಲ್ಲ, ಬೆಂಗಳೂರು ಪೊಲೀಸ್ ಕಮಿಷನರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೆಕ್ರೆಟರಿಗೂ ನೋಟಿಸ್ ನೀಡಿದೆ.


ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಮಾನವ ಹಕ್ಕುಗಳ ಆಯೋಗ ಕ್ರಮ ಕೈಗೊಳ್ಳಲು ಮುಂದಾಗಿದೆ.

ಸುಮೊಟೋ ಕೇಸ್ ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳ ತಂಡ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದು, ಕೇವಲ KSCA ಆಡಳಿತ ಮಂಡಳಿ ಮಾತ್ರವಲ್ಲ, ಬೆಂಗಳೂರು ಪೊಲೀಸ್ ಕಮಿಷನರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೆಕ್ರೆಟರಿಗೂ ನೋಟಿಸ್ ನೀಡಿದೆ.

ನೋಟಿಸ್‌ ನೀಡುವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂಗೆ ಮಾನವ ಹಕ್ಕುಗಳ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅದರಲ್ಲಿ ಎಡಿಜಿಪಿ ದೇವಜ್ಯೋತಿ ರೇ, ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಶ್ಯಾಂ ಭಟ್, ಮಾನವ ಹಕ್ಕುಗಳ ಆಯೋಗದ ಸದಸ್ಯ ಸುರೇಶ್ ಒಂಟುಗೋಡಿ, ಡಿವೈಎಸ್ಪಿಗಳಾದ ಸುಧೀರ್ ಹೆಗ್ಡೆ, ಡಿವೈಎಸ್ಪಿ ಮೋಹನ್ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾದ್ಯಮದವರೊಂದಿಗೆ ಮಾತನಾಡಿದ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಶ್ಯಾಂ ಭಟ್, ಕಾಲ್ತುಳಿತದಿಂದ 11 ಜನರ ಸಾವು ಸಂಭವಿಸಿ 70 ಜನರಿಗೆ ಗಾಯಗಳಾಗಿದೆ. ಬೌರಿಂಗ್ ಮತ್ತು ವೈದೇಹಿಯಲ್ಲಿ ತಲಾ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನವ ಹಕ್ಕುಗಳ ಆಯೋಗದಿಂದ ಎರಡು ಎಫ್.ಐ.ಆರ್ ಆಗಿದೆ. ಆಂಬುಲೆನ್ಸ್ ಇರಲಿಲ್ಲ ಸರಿಯಾದ ಸಮಯಕ್ಕೆ ಗೇಟ್ ತೆಗೆದಿಲ್ಲಎನ್ನುವ ಮಾಹಿತಿ ಇದೆ. ಗುರುವಾರ ಮತ್ತು ಶುಕ್ರವಾರ ದೂರುಗಳು ದಾಖಲಾಗಿವೆ. ಘಟನೆ ಬಗ್ಗೆ ಇವತ್ತು ಸ್ಥಳ ಪರಿಶೀಲಿಸಿದ್ದೇವೆ. ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಸೂಚಿಸುತ್ತೇವೆ ಎಂದು ಅವರು ತಿಳಿಸಿದರು.

ಸುಮೋಟೋ ಕೇಸ್ ನಲ್ಲಿ ಕಮಿಷನರ್ ಆಫ್ ಪೊಲೀಸ್, ಆರೋಗ್ಯ ಇಲಾಖೆ ಸೆಕ್ರೆಟರಿ, ಸ್ಟೇಡಿಯಂನವರ ಮೇಲೆ ಪ್ರಕರಣ ದಾಖಲಿಸಿದ್ದೇವೆ. ಮಾನವ ಹಕ್ಕುಗಳ ಆಯೋಗದ ಪೊಲೀಸ್ ಘಟಕದಿಂದ ತನಿಖೆ ನಡೆಸಲು ನ್ಯಾಯಾಲಯ ಸೂ‍ಚನೆ ಕೊಟ್ಟರೆ ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Read More
Next Story