
ಎಂ ಬಿ ಪಾಟೀಲ್
ಲಿಂಗಾಯತ ಪ್ರತ್ಯೇಕ ಧರ್ಮ ಆಗಿದ್ದರೆ ಹೆಚ್ಚು ಸೌಲಭ್ಯ ಸಿಗುತ್ತಿತ್ತು: ಎಂ.ಬಿ.ಪಾಟೀಲ್
ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.
ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಇಂದು ಲಿಂಗಾಯತ ಎಲ್ಲ ಉಪಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಜಿಲ್ಲಾ ಉಸ್ತುಚಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಅವರು ಬುಧವಾರ ವಿಜಯಪುರದ ಬಬಲೇಶ್ವರ ತಾಲೂಕಿನ ಧನ್ಯಾಳದಲ್ಲಿ ಬುಧವಾರ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಮಾಡಿ ಮಾತನಾಡಿದರು.
ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೆವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕಿದ್ದರೆ, ಇಂದು ಲಿಂಗಾಯತ ಎಲ್ಲ ಉಪಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಅವರು ತಿಳಿಸಿದರು.
1881ರಲ್ಲಿ ಮೈಸೂರು ಅರಸರು ಲಿಂಗಾಯಿತರನ್ನು ಪ್ರತ್ಯೇಕ ಧರ್ಮದ ಕಾಲಂನಿಂದ ತೆಗೆದು ಹಿಂದೂ ಧರ್ಮದ ಶೂದ್ರ ವರ್ಣದಲ್ಲಿ ಸೇರಿಸಿದ್ದರು. ದಯವೇ ಧರ್ಮದ ಮೂಲವಯ್ಯ ಎಂಬ ತಿರುಳು ಹೊಂದಿರುವ ಬಸವ ಧರ್ಮ ಪಾಲನೆಯಾದರೆ ವಿಶ್ವದಲ್ಲಿ ಯುದ್ಧದ ವಾತಾವರಣವೇ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಬಸವ ಭಾರತವಾಗಲಿದೆ. ಆಗ ದೇಶದಲ್ಲಿ ಕಾಯಕ, ದಾಸೋಹ, ಸಮಾನತೆ, ಸಾಮರಸ್ಯ ನೆಲೆಸಲಿದೆ ಎಂದು ಹೇಳಿದರು.