ಡಿ.ಜೆ. ಹಳ್ಳಿ  ಗಲಭೆ: ಮೂವರು ದೋಷಿಗಳಿಗೆ 7 ವರ್ಷ ಕಠಿಣ ಶಿಕ್ಷೆ
x

ಕೆ.ಜಿ.ಹಳ್ಳಿ ಗಲಭೆ

ಡಿ.ಜೆ. ಹಳ್ಳಿ ಗಲಭೆ: ಮೂವರು ದೋಷಿಗಳಿಗೆ 7 ವರ್ಷ ಕಠಿಣ ಶಿಕ್ಷೆ

2020ರ ಆಗಸ್ಟ್ 11ರಂದು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿಕರೊಬ್ಬರು ಪ್ರವಾದಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ, ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ಭುಗಿಲೆದ್ದಿತ್ತು


2020ರ ಡಿ.ಜೆ. ಹಳ್ಳಿ - ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರದ ಎನ್‌ಐಎ ವಿಶೇಷ ನ್ಯಾಯಾಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದ ಮೂವರು ಆರೋಪಿಗಳಿಗೆ ನ್ಯಾಯಾಲಯವು 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ತಲಾ 36,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಈ ಬೃಹತ್ ಹಿಂಸಾಚಾರ ಪ್ರಕರಣದಲ್ಲಿ ಪ್ರಕಟವಾದ ಮೊದಲ ಶಿಕ್ಷೆ ಇದಾಗಿದೆ.

2020ರ ಆಗಸ್ಟ್ 11ರಂದು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿಕರೊಬ್ಬರು ಪ್ರವಾದಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ, ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ಭುಗಿಲೆದ್ದಿತ್ತು. ಗಲಭೆಕೋರರು ಪೊಲೀಸ್ ಠಾಣೆಗಳು, ಶಾಸಕರ ಮನೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಬೆಂಕಿ ಹಚ್ಚಿ, ಭಾರೀ ನಷ್ಟವನ್ನುಂಟು ಮಾಡಿದ್ದರು. ಈ ಘಟನೆಯು ರಾಷ್ಟ್ರಮಟ್ಟದಲ್ಲಿ ತೀವ್ರ ಸದ್ದು ಮಾಡಿತ್ತು.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ಎನ್‌ಐಎ, 138 ಜನರ ವಿರುದ್ಧ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿತ್ತು. ಇದೀಗ, ವಿಚಾರಣೆಯ ಹಂತದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡ ಮೂವರು ದೋಷಿಗಳಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ. ಈ ತೀರ್ಪು, ಪ್ರಕರಣದ ಉಳಿದ ಆರೋಪಿಗಳ ವಿಚಾರಣೆಯ ಮೇಲೂ ಮಹತ್ವದ ಪರಿಣಾಮ ಬೀರುವ ಸಾಧ್ಯತೆಯಿದೆ.

Read More
Next Story