ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ: ದರ್ಶನ್‌ ಬಂಧನ ವಿಚಾರಕ್ಕೆ ನಟ ಸುದೀಪ್‌ ಪ್ರತಿಕ್ರಿಯೆ
x

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ: ದರ್ಶನ್‌ ಬಂಧನ ವಿಚಾರಕ್ಕೆ ನಟ ಸುದೀಪ್‌ ಪ್ರತಿಕ್ರಿಯೆ


ರಾಜ್ಯದ್ಯಂತ ಸಾಕಷ್ಟು ಸುದ್ದಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಇದೇ ಮೊದಲ ಬಾರಿಗೆ ನಟ ಸುದೀಪ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ʻʻಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ಸತ್ಯ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿʼʼ ಎಂದು‌ ಸುದೀಪ್ ಹೇಳಿದ್ದಾರೆ.

ಇದೇ ವೇಳೆ ಚಿತ್ರರಂಗದಿಂದ ದರ್ಶನ್ ಬ್ಯಾನ್ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುದೀಪ್, ʻʻಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಹಿರಿಯರು ಕಟ್ಟಿ ಬೆಳಿಸಿದ ಚಿತ್ರರಂಗ ಯಾರೋ ಒಬ್ಬರಿಂದ ಹಾಳಾಗಬಾರದು. ಆರೋಪದಿಂದ ಮುಕ್ತವಾಗಿ ಹೊರಬಂದ ಮೇಲೆ ಬ್ಯಾನ್ ಮಾಡಿದರೆ ಪ್ರಯೋಜನವೇನು? ಬ್ಯಾನ್ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು, ನಾನು ಯಾರ ಪರವೂ ಇಲ್ಲ. ವಿರುದ್ಧವೂ ಇಲ್ಲ. ನಾನು ನ್ಯಾಯದ ಪರ ಇದ್ದೇನೆʼʼ ಎಂದು ತಿಳಿಸಿದರು.

ʻʻರೇಣುಕಾಸ್ವಾಮಿ ಹತ್ಯೆ ವಿಚಾರದಲ್ಲಿ ಅವರ ಕುಟುಂಬಕ್ಕೆ ಎಲ್ಲರ ಹೃದಯ ಮಿಡಿಯುತ್ತಿದೆ. ವಾತಾವರಣ ಏನೋ ಸರಿ ಕಾಣಿಸುತ್ತಿಲ್ಲ. ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್​ಚಿಟ್​ ಬೇಕಾಗಿದೆ. ಚಿತ್ರರಂಗ ಎಂದರೆ ಒಬ್ಬರು-ಇಬ್ಬರು ಅಲ್ಲ. ನೂರಾರು ಕಲಾವಿದರಿದ್ದಾರೆ. ಅಪರಾಧಿಗೆ ಶಿಕ್ಷೆಯಾದರೆ ಚಿತ್ರರಂಗ ಖುಷಿಪಡುತ್ತದೆʼʼ ಎಂದು ಸುದೀಪ್​ ಹೇಳಿದ್ದಾರೆ.

Read More
Next Story