LIVE Dharmasthala Mass Burial Allegation|ನೇತ್ರಾವತಿ ಸ್ನಾನಘಟ್ಟ ಪ್ರದೇಶದಲ್ಲಿ ಶವಗಳಿಗೆ ಹುಡುಕುತ್ತಿರುವ ಎಸ್‌ಐಟಿ
x

Dharmasthala Mass Burial Allegation|ನೇತ್ರಾವತಿ ಸ್ನಾನಘಟ್ಟ ಪ್ರದೇಶದಲ್ಲಿ ಶವಗಳಿಗೆ ಹುಡುಕುತ್ತಿರುವ ಎಸ್‌ಐಟಿ

ಅಪರಿಚಿತ ವ್ಯಕ್ತಿ ತೋರಿಸಿರುವ ಸ್ಥಳಗಳನ್ನು ಗುರುತಿಸಿ ಶವಗಳನ್ನು ಹೊರತೆಗೆಯಲು ಅಗೆಯುವ ಕೆಲಸ ಪ್ರಾರಂಭಿಸಲಾಗಿದೆ.


ಶವಗಳನ್ನು ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಧರ್ಮಸ್ಥಳದಲ್ಲಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಶವಗಳನ್ನು ಹುಡುಕುವ ಕಾರ್ಯ ಆರಂಭಿಸಿ ಅಗೆಯಲಾಗುತ್ತಿದೆ.

ಅಪರಿಚಿತ ವ್ಯಕ್ತಿ ಶವಗಳನ್ನು ಹೂತಿಟ್ಟಿರುವ ಸ್ಥಳಗಳನ್ನು ಗುರುತಿಸಿದ್ದು, ಸುಮಾರು 13 ಸ್ಥಳಗಳನ್ನು ಪತ್ತೆ ಮಾಡಲಾಗಿದೆ ಎಂದು ಹೇಳಲಾಗಿದೆ. ಅಪರಿಚಿತ ವ್ಯಕ್ತಿ ತೋರಿಸಿರುವ ಸ್ಥಳಗಳನ್ನು ಗುರುತಿಸಿ ಶವಗಳನ್ನು ಹೊರತೆಗೆಯುವ ಕೆಲಸ ಪ್ರಾರಂಭಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ. ಅಲ್ಲದೇ ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು, ಅವರ ಸಮಕ್ಷಮದಲ್ಲಿ ಅಗೆಯುವ ಕೆಲಸ ನಡೆಸಲಾಗುತ್ತಿದೆ ಎನ್ನಲಾಗಿದೆ.

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಮೊದಲು ಶವಗಳನ್ನು ಹೊರ ತೆಗೆಯುವ ಕೆಲಸ ನಡೆಸಲಾಗುತ್ತಿದೆ. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಕಾರ್ಯ ನಡೆಸಲಾಗುತ್ತಿದೆ. ಶವಗಳನ್ನು ಹೊರತೆಗೆಯುವ ಕಾರ್ಯಕ್ಕೆ 10ಕ್ಕೂ ಹೆಚ್ಚುಕಾರ್ಮಿಕರನ್ನು ನಿಯೋಜನೆ ಮಾಡಿಕೊಳ್ಳಲಾಗಿದ್ದು, ಧರ್ಮಸ್ಥಳದ ಗ್ರಾಮಪಂಚಾಯಿತಿ ಕಾರ್ಮಿಕರು ಅಗೆಯುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ಶವಗಳನ್ನು ಹೂತಿಟ್ಟಿರುವ ಸ್ಥಳಗಳನ್ನು ಗುರುತಿಸಿರುವ ಪೊಲೀಸರು ಅಪರಿಚಿತ ವ್ಯಕ್ತಿಯ ಹೇಳಿರುವ ಸ್ಥಳಗಳಿಗೆ ಎಸ್ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ ಇಬ್ಬರನ್ನು ಶಸ್ತ್ರಸಜ್ಜಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದಟ್ಟ ಅರಣ್ಯದಲ್ಲಿ ಸರ್ಪಗಾವಲು ಹಾಕಲಾಗಿದೆ. ಗುರುತಿಸಿದ ಜಾಗಗಳಿಗೆ ನಂಬರ್ ನೀಡಲಾಗಿದೆ. ಒಂದೆಡೆ ಅಗೆಯುವ ಕೆಲಸ ನಡೆಯುತ್ತಿದ್ದರೆ, ಉಳಿದಿರುವ ಜಾಗಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ.

ಧರ್ಮಸ್ಥಳದಲ್ಲಿ ಶವ ಹೂತಿಟ್ಟಿರುವ ಬಗ್ಗೆ ಅಪರಿಚಿತ ವ್ಯಕ್ತಿ ಹೇಳಿಕೆ ನೀಡಿದ ಬಳಿಕ ರಾಜ್ಯದಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಸರ್ಕಾರವು ತನಿಖೆಗಾಗಿ ಹಿರಿಯ ಪೊಲೀಸ್‌ ಅಧಿಕಾರಿ ಪ್ರಣವ್‌ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖೆ ತಂಡ ರಚಿಸಲಾಗಿದೆ. ಧರ್ಮಸ್ಥಳದಲ್ಲಿ ಪೊಲೀಸ್‌ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.


Live Updates

  • 29 July 2025 3:49 PM IST

    ಪೌರಕಾರ್ಮಿಕರೊಬ್ಬರು ನ್ಯಾಯಾಲಯಕ್ಕೆ ನೀಡಿದ ಮಾಹಿತಿಯಂತೆ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ತನಿಖೆಗೆ ಸರ್ಕಾರ ರಚಿಸಿರುವ ಎಸ್‌ಐಟಿ  ಧರ್ಮಸ್ಥಳ ಸ್ನಾನಘಟ್ಟ ಪ್ರದೇಶದಲ್ಲಿ ಅದಿಕೃತವಾಗಿ ಶೋಧನೆ ಆರಂಭಿಸಿದೆ. 

    ಆದರೆ, ವಿಪರೀತ ಮಳೆಯಿಂದಾಗಿ ನೀರಿನ ಒರತೆಯಿಂದಾಗಿ ಶೋಧನೆ ಕಾರ್ಯಕ್ಕೆ ಅಡ್ಡಿಯಾಗಿದೆ.  ಅಸ್ಥಿಪಂಜರವೊಂದು ಸಿಕ್ಕಿದೆ ಎಂಬ ಊಹಾಪೋಹವೂ ಕೇಳಿಬಂದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ. 

  • 29 July 2025 3:47 PM IST

    ಧರ್ಮಸ್ಥಳ ಪ್ರಕರಣ; ಮೃತದೇಹ ಪತ್ತೆಗೆ SITಯಿಂದ ಅಗೆತ ಕಾರ್ಯ ಆರಂಭ

    ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಳೆಯ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿ, ವಿಶೇಷ ತನಿಖಾ ದಳವು (SIT) ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಹೂಳಲಾಗಿರುವ ಮೃತದೇಹಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ, ಸಾಕ್ಷಿದಾರರು ತೋರಿಸಿದ ಜಾಗದಲ್ಲಿ ಅಗೆತದ ಕಾರ್ಯವನ್ನು SIT ಆರಂಭಿಸಿದೆ.

    ಈ ಪ್ರಕರಣವು ದೀರ್ಘಕಾಲದಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಯಲ್ಲಿದ್ದು, ಹಲವಾರು ಅನುಮಾನಗಳನ್ನು ಹುಟ್ಟುಹಾಕಿತ್ತು. ಇದೀಗ SIT ನೇತೃತ್ವದಲ್ಲಿ ಮೃತದೇಹಗಳನ್ನು ಪತ್ತೆಹಚ್ಚುವ ನಿರ್ಧಾರವು ಪ್ರಕರಣದ ಸತ್ಯಾಂಶವನ್ನು ಹೊರತರಲು ಮಹತ್ವದ ಹೆಜ್ಜೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Read More
Next Story