ಹಾಲು ಖರೀದಿ ದರ ಕಡಿತ | ಸರ್ಕಾರದ ವಿರುದ್ಧ ಎಚ್‌ ಡಿಕೆ ಕಿಡಿ
x

ಹಾಲು ಖರೀದಿ ದರ ಕಡಿತ | ಸರ್ಕಾರದ ವಿರುದ್ಧ ಎಚ್‌ ಡಿಕೆ ಕಿಡಿ


ಹಾಲು ಉತ್ಪಾದಕರಿಗೆ ನೀಡುವ ದರದಲ್ಲಿ ₹1.50 ಕಡಿತ ಮಾಡಿರುವ ಸರ್ಕಾರದ ಕ್ರಮವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರ ಕಡಿತಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನದಾತನ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ.

ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರ್ಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

Read More
Next Story