Yogesh Gowda Case: ಜೂ. 13ರಂದು ಶಾಸಕ ವಿನಯ್ ಕುಲಕರ್ಣಿ ನ್ಯಾಯಾಲಯಕ್ಕೆ ಶರಣು
x

ವಿನಯ್‌ ಕುಲಕರ್ಣಿ

Yogesh Gowda Case: ಜೂ. 13ರಂದು ಶಾಸಕ ವಿನಯ್ ಕುಲಕರ್ಣಿ ನ್ಯಾಯಾಲಯಕ್ಕೆ ಶರಣು

ಕೋರ್ಟ್‌ ಆದೇಶಕ್ಕೆ ತಲೆಬಾಗುತ್ತೇನೆ. ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ ಎಂದು ಶಾಸಕ ವಿನಯ್‌ ಕುಲಕರ್ಣಿ ತಿಳಿಸಿದ್ದಾರೆ.


ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಜಾಮೀನು ರದ್ದಾದ ಹಿನ್ನೆಲೆಯಲ್ಲಿ, ಶಾಸಕ ವಿನಯ್ ಕುಲಕರ್ಣಿ ಅವರು ಸುಪ್ರೀಂ ಕೋರ್ಟ್ ಸೂಚನೆಯಂತೆ ಜೂನ್ 13ರಂದು (ಶುಕ್ರವಾರ) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ.

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿನಯ್ ಕುಲಕರ್ಣಿ, "ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇನೆ. ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ಕೋರ್ಟ್‌ಗೆ ಶರಣಾಗುತ್ತೇನೆ" ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಮ್ಮ ವಿರುದ್ಧ ಹುನ್ನಾರ ನಡೆದಿದೆ ಎಂದು ಆರೋಪಿಸಿದ ಅವರು, "ನಾನೀಗ ಅಸಹಾಯಕ ಸ್ಥಿತಿಯಲ್ಲಿದ್ದೇನೆ. ಸತ್ಯಕ್ಕೆ ಜಯ ಸಿಗುವ ನಂಬಿಕೆ ಇದೆ. ಬಸವಣ್ಣನ ಕಾಲದಲ್ಲೂ ಕೊಂಡಿ ಮಂಚಣ್ಣಗಳು ಇದ್ದರು, ಇವತ್ತೂ ಇದ್ದಾರೆ" ಎಂದು ಹೇಳಿದರು.

ಕ್ಷೇತ್ರವನ್ನು ಪತ್ನಿ ಮತ್ತು ಮಗಳು ನೋಡಿಕೊಳ್ಳುತ್ತಾರೆ

ಕ್ಷೇತ್ರದ ಜನರಿಗೆ ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದ ವಿನಯ್ ಕುಲಕರ್ಣಿ, "ಇನ್ನು ಮುಂದೆ ಕ್ಷೇತ್ರವನ್ನು ನನ್ನ ಪತ್ನಿ ಮತ್ತು ಮಗಳು ನೋಡಿಕೊಳ್ಳುತ್ತಾರೆ. ಅವರಿಗೆ ನಿಮ್ಮ ಸಹಕಾರ ನೀಡಬೇಕು" ಎಂದು ಮನವಿ ಮಾಡಿದ್ದಾರೆ. ಬುಧವಾರ ಕಿತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಬೆಂಗಳೂರಿಗೆ ತೆರಳುವುದಾಗಿ ಅವರು ತಿಳಿಸಿದರು.

ಜೂನ್ 6ರಂದು ಸುಪ್ರೀಂ ಕೋರ್ಟ್, ಯೋಗೀಶಗೌಡ ಗೌಡರ್ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮಂಜೂರು ಮಾಡಲಾಗಿದ್ದ ಜಾಮೀನನ್ನು ರದ್ದುಪಡಿಸಿತ್ತು. ಒಂದು ವಾರದೊಳಗೆ ವಿಚಾರಣಾ ಕೋರ್ಟ್ ಮುಂದೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

Read More
Next Story