Shootout | ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ; ಆಸ್ಪತ್ರೆಗೆ ದಾಖಲು
x

ರಿಕ್ಕಿ ರೈ ಮೇಲೆ ಫೈರಿಂಗ್​ ನಡೆದಿದೆ. 

Shootout | ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ; ಆಸ್ಪತ್ರೆಗೆ ದಾಖಲು

ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಕಾಂಪೌಂಡ್ ಬಳಿ ರಾತ್ರಿ 1.30.ರ ಸುಮಾರಿಗೆ ದುಷ್ಕರ್ಮಿಗಳು ರಿಕ್ಕಿ ರೈ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ರಿಕ್ಕಿ ರೈಗೆ ಗಾಯಗಳಾಗಿವೆ


ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರನಾದ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಕಾಂಪೌಂಡ್ ಬಳಿ ರಾತ್ರಿ 1.30.ರ ಸುಮಾರಿಗೆ ದುಷ್ಕರ್ಮಿಗಳು ರಿಕ್ಕಿ ರೈ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ರಿಕ್ಕಿ ರೈಗೆ ಗಾಯಗಳಾಗಿದ್ದು, ತಕ್ಷಣವೇ ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಕಿ ರೈ ತಮ್ಮ ಫಾರ್ಚೂನ‌ರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ.

ಘಟನಾ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್‌ ಗೌಡ, ಡಿವೈಎಸ್‌ಪಿ ಶ್ರೀನಿವಾಸ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದಾರೆ.

ದಾಳಿಯ ಹಿಂದಿನ ಕಾರಣ ತಿಳಿಡಿಬಂದಿಲ್ಲ. ಶೂಟೌಟ್ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೇ ಬೀಸಿದ್ದಾರೆ.

ರಿಕ್ಕಿ ರೈ ಮೇಲೆ ನಡೆದ ಶೂಟೌಟ್‌ನಲ್ಲಿ ದುಷ್ಕರ್ಮಿಗಳು ಡ್ರೈವಿಂಗ್ ಸೀಟ್‌ನನ್ನೇ ಗುರಿಯಾಗಿಸಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ರಿಕ್ಕಿ ರೈ ಸಾಮಾನ್ಯವಾಗಿ ತಾನೇ ಕಾರು ಚಾಲನೆ ಮಾಡುತ್ತಿದ್ದ ಕಾರಣ, ದಾಳಿಕೋರರು ಡ್ರೈವಿಂಗ್ ಸೀಟ್‌ನ ಮೇಲೆ ಗುರಿ ಇಟ್ಟಿದ್ದರು. ಆದರೆ, ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು, ಗುಂಡಿನ ದಾಳಿಯ ವೇಳೆ ತಕ್ಷಣ ಮುಂದೆ ಬಾಗಿದ್ದರಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ರಷ್ಯಾದಿಂದ ವಾಪಸಾಗಿದ್ದ ರಿಕ್ಕಿ ರೈ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯವಾಗಿದ್ದರು. ಚಾಲಕ ರಾಜು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಿಡದಿ ಇನ್ ಸ್ಪೆಕ್ಟರ್ ಶಂಕರ್ ನಾಯಕ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.

Read More
Next Story