Mysore MUDA scam|  ಸಿಎಂ ಸಿದ್ದರಾಮಯ್ಯ ತನಿಖೆಗೆ ನಾಲ್ಕು ತಂಡ ರಚಿಸಿದ ಲೋಕಾಯುಕ್ತ ಪೊಲೀಸ್‌
x
ಸಿ.ಎಂ ಸಿದ್ದರಾಮಯ್ಯ

Mysore MUDA scam| ಸಿಎಂ ಸಿದ್ದರಾಮಯ್ಯ ತನಿಖೆಗೆ ನಾಲ್ಕು ತಂಡ ರಚಿಸಿದ ಲೋಕಾಯುಕ್ತ ಪೊಲೀಸ್‌

1998ರಲ್ಲಿ ಜಮೀನಿನ ಡಿನೋಟಿಫೈನಿಂದ ಶುರುವಾಗಿ 2022ರಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಹೆಸರಿಗೆ 14 ಬದಲಿ ನಿವೇಶನಗಳು ಖಾತೆಯಾಗುವವರೆಗಿನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಎಲ್ಲ ಅಧಿಕಾರಿಗಳನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ


ಸಿ.ಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ತನಿಖೆ ನಡೆಸಲು ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ ಉದೇಶ್‌ ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಮೈಸೂರು ಲೋಕಾಯುಕ್ತ ಡಿವೈಎಸ್‌ಪಿ ಎಸ್.ಕೆ. ಮಾಲತೇಶ್, ಚಾಮರಾಜನಗರ ಡಿವೈಎಸ್‌ಪಿ ಮ್ಯಾಥ್ಯು ಥಾಮಸ್, ಮೈಸೂರಿನ ಇನ್‌ಸ್ಪೆಕ್ಟರ್ ರವಿಕುಮಾರ್ ಹಾಗೂ ಕೊಡಗು ಇನ್‌ಸ್ಪೆಕ್ಟರ್ ಲೋಕೇಶ್‌ಕುಮಾರ್ ನೇತೃತ್ವದಲ್ಲಿ ತಂಡಗಳು ರಚನೆಯಾಗಿವೆ. ತನಿಖೆಯ ಸ್ವರೂಪ, ಪ್ರಶ್ನಾವಳಿಗಳ ಕುರಿತು ಈ ತಂಡಗಳು ಪ್ರತ್ಯೇಕವಾಗಿ ಸಿದ್ದತೆ ಮಾಡಿಕೊಳ್ಳುತ್ತಿವೆ. .

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವಾರು ದಾಖಲೆಗಳ ಸಾಕ್ಷ್ಯವನ್ನು ಸಂಗ್ರಹಿಸಲಿದ್ದು, 55 ವರ್ಷಗಳ ಅವಧಿಯ ಭೂ ದಾಖಲೆಗಳನ್ನು ಪರಿಶೀಲಿಸಬೇಕಿದೆ. ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿ 1968ರಿಂದ 2023ರವರೆಗೆ ನಡೆದಿರುವ ಎಲ್ಲ ಭೂವ್ಯವಹಾರಗಳ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ. ಅದರಲ್ಲಿ ಸಾಕಷ್ಟು ದಾಖಲೆಗಳು ಈಗಾಗಲೇ ನಾಪತ್ತೆ ಆಗಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಲಭ್ಯ ಇರುವ ದಾಖಲೆಗಳನ್ನು ದೂರುದಾರ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಒದಗಿಸಿದ್ದು, ಅದರ ನೈಜತೆಯನ್ನೂ ಪೊಲೀಸರು ಪರಿಶೀಲಿಸಲಿದ್ದಾರೆ.

1998ರಲ್ಲಿ ಜಮೀನಿನ ಡಿನೋಟಿಫೈನಿಂದ ಶುರುವಾಗಿ 2022ರಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಹೆಸರಿಗೆ 14 ಬದಲಿ ನಿವೇಶನಗಳು ಖಾತೆಯಾಗುವವರೆಗಿನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿರುವ ಎಲ್ಲ ಅಧಿಕಾರಿಗಳನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ಅವರಲ್ಲಿ ಅನೇಕರು ನಿವೃತ್ತಿ ಹೊಂದಿದ್ದು ಉಳಿದವರಲ್ಲಿ ಬಹುತೇಕರು ಮೈಸೂರಿನಿಂದ ವರ್ಗಾವಣೆಯಾಗಿದ್ದಾರೆ. 2005- 2006ರ ಅವಧಿಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಜಿ.ಕುಮಾರ್ ನಾಯಕ್ ಎಸ್. ಸೆಲ್ವಕುಮಾರ್ ಮೈಸೂರು ತಹಶೀಲ್ದಾರ್ ಮಲ್ಲಿಗೆ ಶಂಕರ್ 2022ರಲ್ಲಿ ಮೈಸೂರು ಉತ್ತರ ಉಪ ನೋಂದಣಾಧಿಕಾರಿ ಎಸ್.ಕೆ. ಸಿದ್ದಯ್ಯ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಮುಡಾ ಆಯುಕ್ತರ ಅಕ್ರಮಗಳ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದ ಹಿಂದಿನ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಸಾಕ್ಷಿಯನ್ನಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

Read More
Next Story