ವಿಧಾನ ಪರಿಷತ್‌ ಚುನಾವಣೆ | ಮೂರು ಕ್ಷೇತ್ರ ಎನ್‌ಡಿಎಗೆ, ಮೂರು ಕಾಂಗ್ರೆಸ್‌ಗೆ
x

ವಿಧಾನ ಪರಿಷತ್‌ ಚುನಾವಣೆ | ಮೂರು ಕ್ಷೇತ್ರ ಎನ್‌ಡಿಎಗೆ, ಮೂರು ಕಾಂಗ್ರೆಸ್‌ಗೆ

ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರರ ಒಟ್ಟು 6 ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ- ಜೆಡಿಎಸ್‌ ಮೈತ್ರಿಯ ಎನ್‌ಡಿಎ ಹಾಗೂ ಕಾಂಗ್ರೆಸ್‌ ತಲಾ ಮೂರು ಸ್ಥಾನಗಳಲ್ಲಿ ಜಯ ಗಳಿಸಿವೆ.


ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರರ ಒಟ್ಟು 6 ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ- ಜೆಡಿಎಸ್‌ ಮೈತ್ರಿಯ ಎನ್‌ಡಿಎ ಹಾಗೂ ಕಾಂಗ್ರೆಸ್‌ ತಲಾ ಮೂರು ಸ್ಥಾನಗಳಲ್ಲಿ ಜಯ ಗಳಿಸಿವೆ.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರ ಸೇರಿ ಎರಡೂ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿದ್ದು, ಆ ಕ್ಷೇತ್ರಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ.

ಕ್ಷೇತ್ರಗಳುಗೆಲುವುಪಕ್ಷ
ನೈರುತ್ಯ ಶಿಕ್ಷಕರ ಕ್ಷೇತ್ರಎಸ್‌ಎಲ್‌ ಬೋಜೇಗೌಡಎನ್‌ಡಿಎ-ಜೆಡಿಎಸ್
ನೈರುತ್ಯ ಪದವೀಧರ ಕ್ಷೇತ್ರಧನಂಜಯ್‌ ಸರ್ಜಿಎನ್‌ಡಿಎ-ಬಿಜೆಪಿ
ಆಗ್ನೇಯ ಶಿಕ್ಷಕರ ಕ್ಷೇತ್ರಡಿ‌ ಟಿ ಶ್ರೀನಿವಾಸ್ಕಾಂಗ್ರೆಸ್
ಬೆಂಗಳೂರು ಪಧವೀಧರ ಕ್ಷೇತ್ರರಾಮೋಜಿ ಗೌಡಕಾಂಗ್ರೆಸ್
ಈಶಾನ್ಯ ಪದವೀಧರ ಕ್ಷೇತ್ರಡಾ. ಚಂದ್ರಶೇಖರ್‌ ಪಾಟೀಲ್ಕಾಂಗ್ರೆಸ್
ದಕ್ಷಿಣ ಶಿಕ್ಷಕರ ಕ್ಷೇತ್ರವಿವೇಕಾನಂದಎನ್‌ಡಿಎ-ಜೆಡಿಎಸ್

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಬೋಜೇಗೌಡ ಗೆಲುವು ಸಾಧಿಸಿದ್ದಾರೆ. ಬೋಜೇಗೌಡ ಸಹ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆಯುವ ಮೂಲಕ 2ನೇ ಬಾರಿಗೆ ವಿಧಾನಪರಿಷತ್​ಗೆ ಆಯ್ಕೆಯಾದರು. ಅವರು 9,829 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ್‌ 4,562 ಮತಗಳನ್ನು ಪಡೆದಿದ್ದಾರೆ. ಬೋಜೇಗೌಡ 5,267 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದರು.

ನೈರುತ್ಯ ಪದವೀಧರ ಕ್ಷೇತ್ರದ ಮತ ಎಣಿಕೆಯಲ್ಲಿ ಡಾ. ಧನಂಜಯ ಸರ್ಜೀ, ಕಾಂಗ್ರೆಸ್‌ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಾ. ಧನಂಜಯ ಸರ್ಜಿ 37,627 ಮತ ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಆಯನೂರು ಮಂಜುನಾಥ್‌ 13,516 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ 7,039 ಮತ ಪಡೆದು ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಕೇವಲ 2518 ಮತ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ 6,935 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ 8,909 ಮತಗಳಿಂದ ಗೆದ್ದಿದ್ದು ಹಾಲಿ ಸದಸ್ಯ ನಾರಾಯಣಸ್ವಾಮಿಗೆ ಸೋಲಾಗಿದೆ‌. ಇಲ್ಲಿ ಚಲಾವಣೆಯಾದ 24,106 ಮತಗಳ ಎಣಿಕೆ ಏಳು ಸುತ್ತುಗಳಲ್ಲಿ ನಡೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಗೆಲುವು ಸಾಧಿಸಿದ್ದಾರೆ. 704 ಮತಗಳು ತಿರಸ್ಕೃತಗೊಂಡಿವೆ. ಇದೀಗ ಈ ಎರಡೂ ಕ್ಷೇತ್ರಗಳನ್ನು ಬಿಜೆಪಿ ಕಳೆದುಕೊಂಡಿದ್ದು ಕಾಂಗ್ರೆಸ್ ಪಾಲಾಗಿವೆ. ಬಿಜೆಪಿ ಅಭ್ಯರ್ಥಿ ವೈ.ಎ ನಾರಾಯಣಸ್ವಾಮಿ 7,142 ಮತ ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ, ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 6,894 ಮತ ಪಡೆದಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದು ಹಾಲಿ ಸದಸ್ಯ ದೇವೇಗೌಡರ ವಿರುದ್ಧ ಗೆಲುವಿನ ನಗೆ ಬೀರಿದರು. ಇಲ್ಲಿ ಚಲಾವಣೆಯಾದ 80,080 ಮತಗಳ ಎಣಿಕೆ ಆರು ಸುತ್ತುಗಳಲ್ಲಿ ನಡೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 8,482 ಮತಗಳು ಅಸಿಂಧುಗೊಂಡಿವೆ.

ಈಶಾನ್ಯ ಪದವೀಧರ ಕ್ಷೇತ್ರ: ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ಐದಕ್ಕೆ ಐದು ಸ್ಥಾನಗಳನ್ನು ಗೆದ್ದು ಬೀಗಿದ ಕೈಪಾಳಯ ಇದೀಗ ಈಶಾನ್ಯ ಪದವೀಧರ ಕ್ಷೇತ್ರದಲ್ಲೂ ಭರ್ಜರಿ‌ ಜಯಬೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ. ಕೈ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಪಾಟೀಲ್ ಸತತ ಎರಡನೇ ಬಾರಿಗೆ ಗೆಲುವಿನ ನಗೆ ಬಿರಿದ್ದಾರೆ. ಇದರೊಂದಿಗೆ ಮತ್ತೊಮ್ಮೆ ಕಲ್ಯಾಣದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಪ್ರಥಮ ಪ್ರಾಶಸ್ತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ 39,496 ಮತಗಳು ಪಡೆದು 4,446 ಮತಗಳಿಂದ ಪ್ರತಿಸ್ಪರ್ಧಿ ಬಿ.ಜೆ.ಪಿಯ ಅಮರನಾಥ ಪಾಟೀಲ್ ಗಿಂತ ಮುನ್ನಡೆ ಸಾಧಿಸಿದ್ದರು.‌ ಆದರೆ ವಿನ್ನಿಂಗ್ ಕೋಟಾ 48,260 ಫಿಕ್ಸ್ ಮಾಡಿದ್ದರಿಂದ ಎರಡನೇ ಪ್ರಾಶಸ್ತ್ಯ ಮತ ಎಣಿಕೆ ಮಾಡಲಾಯಿತು. ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ್ ಪಾಟೀಲ್ ಭರ್ಜರಿ ಜಯಗಳಿಸಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕೆ.ವಿವೇಕಾನಂದ 10,823 ಮತಗಳನ್ನು ಪಡೆದರೆ, ಇವರ ಪ್ರತಿಸ್ಪರ್ಧಿ ಕಾಂಗ್ರೆಸ್​ನ ಮರೀತಿಬ್ಬೇಗೌಡ 6,201 ಮತಗಳನ್ನು ಪಡೆದು 4,622 ಮತಗಳ ಅಂತರದಿಂದ ಸೋಲನುಭವಿಸಿದರು. ವಿವೇಕಾನಂದ ಮೊದಲ ಪ್ರಾಶಸ್ತ್ಯ ಮತಗಳಿಂದ 4 ಬಾರೀ ಗೆದ್ದಿದ್ದ ಮರಿತಿಬ್ಬೇಗೌಡ ಅವರನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾದರು.

Read More
Next Story