ಮುಂಗಾರು ಪೂರ್ವ ಮಳೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೊ ಅಲರ್ಟ್
x
ಮಳೆ

ಮುಂಗಾರು ಪೂರ್ವ ಮಳೆ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೊ ಅಲರ್ಟ್

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದೆ. ಭಾನುವಾರವೂ (ಮೇ 12)ರಂದು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು 23 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.


ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಭಾನುವಾರವೂ (ಮೇ 12)ರಂದು ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು 23 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಯಾವ ಜಿಲ್ಲೆಗಳಲ್ಲಿ ಭಾರೀ ಮಳೆ

ಕಲಬುರಗಿ, ವಿಜಯಪುರ, ಯಾದಗಿರಿ, ಕೊಡುಗು, ಶಿವಮೊಗ್ಗ ಹಾಗೂ ಕರಾವಳಿಯ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಉಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 15ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೇ 18ರ ವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 12 ರಂದು : ಶಿವಮೊಗ್ಗ, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಮಿಂಚು – ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮೇ 13 ರಂದು: ಕಲಬುರಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮೇ 14 ರಂದು: ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ.

ಮೇ 15 ರಂದು: ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಮಿಂಚು ಗುಡುಗು ಸಹಿತ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಪಮಾನ ಮುನ್ಸೂಚನೆ

ರಾಜ್ಯದಲ್ಲಿ ಗರಿಷ್ಟ ತಾಪಮಾನ ಮುಂದಿನ 5 ದಿನಗಳಲ್ಲಿ 2ರಿಂದ 4 ಡಿಗ್ರಿ ಸಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಇರಲಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣ ಹವೆ ಇತ್ತು. ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ)ಯಲ್ಲಿ 9 ಸೆಂ.ಮೀ ಮಳೆಯಾಗಿದೆ. ಗುಬ್ಬಿ (ತುಮಕೂರು ಜಿಲ್ಲೆ) 6 ಸೆಂ.ಮೀ, ಮಂಡ್ಯ (ಮಂಡ್ಯ ಜಿಲ್ಲೆ) 6, ಕೃಷ್ಣರಾಜಸಾಗರ (ಮಂಡ್ಯ ಜಿಲ್ಲೆ) 6, ಕೆ.ಆರ್ ನಗರ (ಮೈಸೂರು ಜಿಲ್ಲೆ) 5, ಹೆಸರಘಟ್ಟ (ಬೆಂಗಳೂರು ನಗರ ಜಿಲ್ಲೆ) 4, ಚಿಕ್ಕಬಳ್ಳಾಪುರ (ಚಿಕ್ಕಬಳ್ಳಾಪುರ ಜಿಲ್ಲೆ) 3, ಚಿತ್ರದುರ್ಗ (ಚಿತ್ರದುರ್ಗ ಜಿಲ್ಲೆ), ಬೆಳಗಾವಿ ವಿಮಾನ ನಿಲ್ದಾಣ (ಬೆಳಗಾವಿ ಜಿಲ್ಲೆ) 2, ಸಂತೆಬೆನ್ನೂರು (ದಾವಣಗೆರೆ ಜಿಲ್ಲೆ) 2, ಕೃಷ್ಣರಾಜಪೇಟೆ (ಮಂಡ್ಯ ಜಿಲ್ಲೆ) 2, ಅರಕಲಗೂಡು (ಹಾಸನ ಜಿಲ್ಲೆ) 2, ಚಿಕ್ಕಮಗಳೂರು (ಚಿಕ್ಕಮಗಳೂರು ಜಿಲ್ಲೆ) 2, ಭಾಗಮಂಡಲ (ಕೊಡಗು ಜಿಲ್ಲೆ) 2, ಹೊಸಕೋಟೆ (ಬೆಂಗಳೂರು ಗ್ರಾಮಾಂತರ ಜಿಲ್ಲೆ) 2, ಯಡ್ರಾಮಿ (ಕಲಬುರ್ಗಿ ಜಿಲ್ಲೆ) 1, ಮಾಗಡಿ (ರಾಮನಗರ ಜಿಲ್ಲೆ) 1, ಕುಶಾಲನಗರ (ಕೊಡಗು ಜಿಲ್ಲೆ) 1, ಅಜ್ಜಂಪುರ (ಚಿಕ್ಕಮಗಳೂರು ಜಿಲ್ಲೆ) 1, ಪಾವಗಡ (ತುಮಕೂರು ಜಿಲ್ಲೆ) ಮೈಸೂರು (ಮೈಸೂರು ಜಿಲ್ಲೆ) 1 ಸೆಂ.ಮೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More
Next Story