ಮಾ. 21ರೊಳಗೆ ರಾಮಮಂದಿರ ಸ್ಫೋಟಗೊಳಿಸುವುದಾಗಿ ಬೆದರಿಕೆ ಪತ್ರ
x

ಮಾ. 21ರೊಳಗೆ ರಾಮಮಂದಿರ ಸ್ಫೋಟಗೊಳಿಸುವುದಾಗಿ ಬೆದರಿಕೆ ಪತ್ರ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟು ಸ್ಫೋಟಗೊಳಿಸಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಸ್ಪೋಟ ಮಾಡುವ ಬೆದರಿಕೆ ಪತ್ರ...


ಬೆಳಗಾವಿ: ನಿಪ್ಪಾಣಿ ನಗರದ ರಾಮಮಂದಿರವನ್ನು ಸ್ಫೋಟ ಮಾಡುತ್ತೇವೆ ಎಂಬ ಬೆದರಿಕೆ ಪತ್ರವು ದೇವಾಲಯ ಆವರಣದಲ್ಲಿ ಪತ್ತೆಯಾಗಿದೆ. ಈ ಪತ್ರ ದೊರೆತ ಬೆನ್ನಲ್ಲಿಯೇ ದೇವಾಲಯದ ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಮಂದಿರಕ್ಕೆ 101 ವರ್ಷಗಳ ಇತಿಹಾಸವಿದೆ. ಇದು ಕಾರಣಿಕ ನುಡಿಯುವ ಕ್ಷೇತ್ರವಾಗಿದ್ದು, ಈ ಮಂದಿರವನ್ನು ಸ್ಫೋಟ ಮಾಡುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ.

ಫೆಬ್ರವರಿ 7 ಮತ್ತು ಫೆಬ್ರವರಿ 28ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ ಮಾರ್ಚ್‌ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.

ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯ ಸಮೀಪ ಪತ್ತೆಯಾಗಿದೆ. ಎರಡನೇ ಪತ್ರ ಮಂದಿರದ ಆವರಣದ ಹನುಮಾನ್ ಮಂದಿರದಲ್ಲಿ ಪತ್ತೆಯಾಗಿವೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಓಲ್ಡ್ ಪಿಬಿ ರಸ್ತೆಯಲ್ಲಿರುವ ಶ್ರೀ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ.

ದೇವಸ್ಥಾದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು ನೋಡಿದವರಾಗಿದ್ದಾರೆ. ಅವರು ದೇವಸ್ಥಾನದ ಆಡಳಿತ ಮಂಡಳಿಗೆ ಮೊದಲು ಮಾಹಿತಿ ನೀಡಿದ್ದರು. ಬಳಿಕ ಅಲ್ಲಿ ಚರ್ಚೆಯಾಗಿ ನಿಪ್ಪಾಣಿ ನಗರ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ರಾಮ ಮಂದಿರ ಸ್ಪೋಟಿಸುವುದಾಗಿ ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಒಂದು ಡಿಆರ್ ಪೋಲಿಸ್ ತುಕಡಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.

Read More
Next Story