CAFE BLAST CASE |  ಸಂಚುಕೋರನ ಬಂಧನ!
x
ರಾಮೇಶ್ವರಂ ಕೆಫೆ

CAFE BLAST CASE | ಸಂಚುಕೋರನ ಬಂಧನ!

ಮೂರು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಎನ್‌ ಐಎ ಗುರುವಾರ ವಶಕ್ಕೆ ಪಡೆದಿದೆ


ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಬುಧವಾರ ಕರ್ನಾಟಕ , ತಮಿಳುನಾಡು ಹಾಗೂ ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತ್ತು.

ಕರ್ನಾಟಕದ 12, ತಮಿಳುನಾಡಿನ 5 ಹಾಗೂ ಉತ್ತರ ಪ್ರದೇಶದ ಒಂದು ಪ್ರದೇಶ ಸೇರಿದಂತೆ 18 ಸ್ಥಳಗಳಲ್ಲಿ ಎನ್ಐಎ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ರಾಮೇಶ್ವರಂ ಕೆಫೆ ಸ್ಫೋಟದ ಸಂಚಿನಲ್ಲಿ ಭಾಗಿಯಾಗಿದ್ದ ಎನ್ನಲಾಗಿರುವ ಮುಝಮ್ಮಿಲ್ ಶರೀಫ್ (Muzammil Shareef) ಎಂಬವನನ್ನು ಬಂಧಿಸಲಾಗಿದೆ.

ಮಾರ್ಚ್ 3 ರಂದು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಎನ್ಐಎ, ಸ್ಫೋಟ ನಡೆಸಿದ ಪ್ರಮುಖ ಆರೋಪಿ ಮುಸಾವಿರ್ ಹುಸ್ಸೇನ್ ಶಾಝಿಬ್‌ನ ಗುರುತು ಪತ್ತೆ ಮಾಡಿತ್ತು. ಅಲ್ಲದೇ ಮತ್ತೊಬ್ಬ ಸಂಚುಕೋರ ಅಬ್ದುಲ್ ಮಥೀನ್ ತಾಹಾ ಎನ್ನುವವನ್ನು ಗುರುತಿಸಲಾಗಿತ್ತು. ಆದರೆ, ಆ ಇಬ್ಬರೂ ಇನ್ನೂ ಪತ್ತೆಯಾಗಿಲ್ಲ.

ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗುರುತಿಸಲಾಗಿರುವ ಪ್ರಮುಖ ಆರೋಪಿಗಳಿಗೂ ಸೆರೆಸಿಕ್ಕಿರುವ ಆರೋಪಿ ಸಹಾಯ ಮಾಡಿದ್ದಾನೆ ಎಂದು ಎನ್ಐಎ ತನಿಖೆಯಿಂದ ಬಹಿರಂಗವಾಗಿದೆ.

ಸ್ಫೋಟದಲ್ಲಿ 9ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಈ ಮೂವರು ಆರೋಪಿಗಳ ಮನೆಗಳು ಹಾಗೂ ಇತರ ಶಂಕಿತರ ಮನೆ ಹಾಗೂ ಅಂಗಡಿಗಳ ಮೇಲೆ ಎನ್ಐಎ ಕಾರ್ಯಾಚರಣೆ ನಡೆಸಿತ್ತು. ತಪಾಸಣೆಯ ವೇಳೆ ನಗದು ಸಹಿತ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನಿಬ್ಬರ ಬಂಧನಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಎನ್ಐಎ ತಿಳಿಸಿದೆ.

Read More
Next Story