ಕಾಂಗ್ರೆಸ್‌ ಸೇರಲು ರೇಣುಕಾಚಾರ್ಯ ನಾಲ್ಕು  ಬಾರಿ ಬಂದಿದ್ದರು: ಎಸ್‌ಎಸ್ ಮಲ್ಲಿಕಾರ್ಜುನ್‌   ಹೇಳಿಕೆ
x

ಕಾಂಗ್ರೆಸ್‌ ಸೇರಲು ರೇಣುಕಾಚಾರ್ಯ ನಾಲ್ಕು ಬಾರಿ ಬಂದಿದ್ದರು: ಎಸ್‌ಎಸ್ ಮಲ್ಲಿಕಾರ್ಜುನ್‌ ಹೇಳಿಕೆ


ʻʻಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಾದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಮೂರು ನಾಲ್ಕು ಬಾರಿ ನನ್ನನ್ನು ಭೇಟಿ ಮಾಡಿ, ಕಾಂಗ್ರೆಸ್‌ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದರುʼʼ ಎಂದು ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತೇನೆ ಎಂದು ಬಂದಾಗ, ನಿನ್ನನ್ನು ಯಾರು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ಹೇಳಿ ನಾನೇ ಕಳುಹಿಸಿದ್ದೆ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ರೇಣುಕಾಚಾರ್ಯ ಇತ್ತ ಸುಳಿಯಲಿಲ್ಲʼʼ ಎಂದು ಹೇಳಿದರು.

ʻʻಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರು ಮಾಜಿ ಸಚಿವ ಎಸ್ ಎ ರವೀಂದ್ರನಾಥ್ ಮೇಲೆ‌ ಇಲ್ಲ ಸಲ್ಲದ ಅರೋಪ ಮಾಡುತ್ತಿದ್ದಾರೆ. ಎಸ್ ಎ ರವೀಂದ್ರನಾಥ್ ಮೇಲೆ ಅಪಾರವಾದ ಗೌರವ ಇದೆ. ಅವರು ನಮ್ಮ ಅಣ್ಣ. ಬಿಜೆಪಿ ಪಕ್ಷ ಕಟ್ಟಲು ಹಗಲುರಾತ್ರಿ ಶ್ರಮಿಸಿವಹಿಸಿ ಇಷ್ಟರ ಮಟ್ಟಿಗೆ ತೆಗೆದುಕೊಂಡು ಬಂದಿದ್ದಾರೆ. ಐದಾರು ಜನರು ಸೇರಿ ರಾತ್ರಿಯಿಡಿ ಪ್ಲಾನ್ ಮಾಡಿ ಬೆಳಗ್ಗೆ ಎದ್ದು ಪಕ್ಷ ಸಂಘಟನೆ ಮಾಡಲು ಓಡಾಡಿದವರು. ಅವರ ಬಗ್ಗೆ ಸಿದ್ದೇಶ್ವರ್ ಲಘುವಾಗಿ ಮಾತನಾಡುತ್ತಾರೆ. ಜಿಲ್ಲೆಯಲ್ಲಿ ಅವರ ಅಭಿವೃದ್ದಿ ಕೆಲಸ ಏನ್ ಇದೆ ಎಂದು ಹೇಳಲಿʼʼ ಎಂದು ಸಿದ್ದೇಶ್ವರ್ ವಿರುದ್ದ ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ.

ʻʻಕಳೆದ ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ನಡೆದಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಸಿದ್ದೇಶ್ವರ್‌ ಅವಧಿಯಲ್ಲಿ ಯಾವ ಕೆಲಸ ನಡೆದಿಲ್ಲ. ಬಾಡಿಗಾರ್ಡ್‌ಗಳನ್ನು ಇಟ್ಟುಕೊಂಡು ಓಡಾಡುತ್ತಿದ್ದರು ಅಷ್ಟೇ. ಅವರ ಕಾಮಗಾರಿಗಳಿಂದ ಜನ ರೋಸಿ ಹೋಗಿದ್ದಾರೆ. ಅದಕ್ಕೆ ಅಶೋಕ ರಸ್ತೆಗೆ ಅವರ ಪ್ರತಿಮೆ ಹಾಕಿಸಬೇಕು. ಬೇಕಾದರೆ ಅದಕ್ಕೆ ಹಣ ನಾನು ಕೊಡುತ್ತೇನೆʼʼ ಎಂದು ವ್ಯಂಗ್ಯವಾಡಿದರು.

Read More
Next Story