ಜೈಲಿನಲ್ಲಿ ರಾಜ್ಯಾತಿಥ್ಯ ಎಫೆಕ್ಟ್‌ | ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್
x

ಜೈಲಿನಲ್ಲಿ ರಾಜ್ಯಾತಿಥ್ಯ ಎಫೆಕ್ಟ್‌ | ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್


ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ನನ್ನು ಪೊಲೀಸರು ಗುರುವಾರ ಬೆಳಿಗ್ಗೆ 9.55ರ ವೇಳೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಿದ್ಧಾರೆ.

ಬೆಳಿಗ್ಗೆ 4 ಗಂಟೆಯ ವೇಳೆಗೆ ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕ, ಚಿಕ್ಕಬಳ್ಳಾಪುರ ಮಾರ್ಗವಾಗಿ ಬಳ್ಳಾರಿಯತ್ತ ದರ್ಶನ್‌ನನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಗಿತ್ತು. ಇದಕ್ಕೂ ಮೊದಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಜೈಲು ಅಧೀಕ್ಷಕರು ಸಮಾಲೋಚನೆ ನಡೆಸಿದರು.

ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆತರಲಾಗಿದೆ. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ವಾಹನಗಳ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿಗೆ ತರಲಾಯಿತು. ದರ್ಶನ್‌ ಬರುತ್ತಿರುವ ವಿಚಾರ ಮೊದಲೇ ತಿಳಿದಿದ್ದರಿಂದ ಜೈಲಿನ ರಸ್ತೆಯಲ್ಲಿ ಜನರು ನಿಂತಿದ್ದರು. ಸದ್ಯ ದರ್ಶನ್‌ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸ್ಥಳಾಂತರಗೊಂಡಿದ್ದಾನೆ.

ಉಳಿದ ವಿಚಾರಣಾಧೀನ ಕೈದಿಗಳನ್ನು ಮೈಸೂರು, ಶಿವಮೊಗ್ಗ, ಧಾರವಾಡ, ವಿಜಯಪುರ, ಕಲಬುರಗಿ, ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.

Read More
Next Story