ಶಿವಮೊಗ್ಗ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ  ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
x

ಶಿವಮೊಗ್ಗ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್.


ಇಲ್ಲಿನ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ವಿಷ್ಣುಪ್ರಿಯಾ (23) ಅವರು ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸೋಮವಾರ (ಜೂನ್ 2) ಪತ್ತೆಯಾಗಿದ್ದಾರೆ.

ವಿಷ್ಣುಪ್ರಿಯಾ ಅವರು ಮೂಲತಃ ಬಳ್ಳಾರಿಯವರು. ಅವರ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್‌ನಲ್ಲಿ ವಾಸಿಸುತ್ತಿದ್ದಾರೆ. ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್‌ಶಿಪ್‌ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್‌ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

Read More
Next Story