ಸಿಎಂ ಸಿದ್ದರಾಮಯ್ಯ ಸಹಿ ನಕಲು ಆರೋಪ: ರಾಜ್ಯಪಾಲರಿಗೆ ಮತ್ತೊಂದು ದೂರು
x
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಸಹಿ ನಕಲು ಆರೋಪ: ರಾಜ್ಯಪಾಲರಿಗೆ ಮತ್ತೊಂದು ದೂರು

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.


Click the Play button to hear this message in audio format

ಮುಡಾ ಹಗರಣದ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ.

'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯನ್ನು ಬೇರೆಯವರು ನಕಲು ಮಾಡಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಂದ ತನಿಖೆ ಮಾಡಿಸಿ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಶನಿವಾರ ದೂರು ಸಲ್ಲಿಸಿರುವ ಅವರು, 'ಮುಖ್ಯಮಂತ್ರಿಯು ಕನ್ನಡದಲ್ಲಿ ಸಹಿ ಮಾಡುವುದು ಸಾಮಾನ್ಯ. ಸಾಕಷ್ಟು ಸರ್ಕಾರಿ ದಾಖಲೆಗಳಲ್ಲಿ ಕನ್ನಡದಲ್ಲಿ ಸಹಿ ಇರುವುದನ್ನು ಗಮನಿಸಿದ್ದೇನೆ. ಆದರೆ, ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ಬರದಿರುವ ಪತ್ರ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಮಾಣಪತ್ರದಲ್ಲಿ ಅವರ ಸಹಿ ಇಂಗ್ಲಿಷ್ ನಲ್ಲಿದೆ. ಅದು ನಕಲು ಆಗಿದ್ದು, ಬೇರೆ ಯಾರೋ ಸಹಿ ಮಾಡಿದ್ದಾರೆ. ಆದ್ದರಿಂದ ಅದನ್ನು ಗಮನಿಸಿ ಸಾಂವಿಧಾನಿಕ ಹುದ್ದೆಯ ಗೌರವ ಕಾಪಾಡಬೇಕು' ಎಂದು ಕೋರಿದ್ದಾರೆ. ದೂರಿನೊಂದಿಗೆ ಆರು ದಾಖಲೆಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ.

Read More
Next Story