ಕಾರ್ಕಳ ಮಾಜಿ ಶಾಸಕರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
x

ಸುದೀಪ್‌ ಭಂಡಾರಿ 

ಕಾರ್ಕಳ ಮಾಜಿ ಶಾಸಕರ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ದಿವಂಗತ ಗೋಪಾಲ ಭಂಡಾರಿ ಅವರು ಕಾರ್ಕಳ ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದರು. ಅವರ ಪುತ್ರನ ಅಕಾಲಿಕ ಮತ್ತು ದುರಂತ ಸಾವು ಇಡೀ ಕುಟುಂಬವನ್ನು ಆಘಾತಕ್ಕೆ ದೂಡಿದೆ.


Click the Play button to hear this message in audio format

ಕಾರ್ಕಳದ ಮಾಜಿ ಶಾಸಕ, ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರು ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಸುದೀಪ್ ಭಂಡಾರಿ ಅವರು ರೈಲ್ವೆ ಹಳಿಯ ಮೇಲೆ ತಮ್ಮ ತಲೆಯನ್ನು ಇಟ್ಟು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸರಳ ಮತ್ತು ಸೌಮ್ಯ ಸ್ವಭಾವದವರಾಗಿದ್ದ ಸುದೀಪ್ ಅವರು ಹೆಬ್ರಿಯಲ್ಲಿ ವೈನ್ ಶಾಪ್ ಒಂದನ್ನು ನಡೆಸುತ್ತಿದ್ದರು

ಸುದೀಪ್ ಭಂಡಾರಿ ಅವರು ಇಂತಹ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲು ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಕುಟುಂಬಕ್ಕೆ ಆಘಾತ

ದಿವಂಗತ ಗೋಪಾಲ ಭಂಡಾರಿ ಅವರು ಕಾರ್ಕಳ ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದರು. ಅವರ ಪುತ್ರನ ಅಕಾಲಿಕ ಮತ್ತು ದುರಂತ ಸಾವು ಇಡೀ ಕುಟುಂಬವನ್ನು ಆಘಾತಕ್ಕೆ ದೂಡಿದೆ. ಸುದೀಪ್ ಭಂಡಾರಿ ಅವರು ತಮ್ಮ ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

Read More
Next Story