Honey Trap | ಹನಿಟ್ರ್ಯಾಪ್ ಆರೋಪ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌
x

ಸುಪ್ರೀಂ ಕೋರ್ಟ್‌ 

Honey Trap | ಹನಿಟ್ರ್ಯಾಪ್ ಆರೋಪ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್‌

ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಕುರಿತಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಲಾಯರ್​ ವಿನಯ್ ಕುಮಾರ್ ಸಿಂಗ್​​ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.


ಕರ್ನಾಟಕದಲ್ಲಿ ನ್ಯಾಯಾಧೀಶರು ಮತ್ತು ಜನಪ್ರತಿನಿಧಿಗಳ ಹನಿಟ್ರ್ಯಾಪ್‌ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​​ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.

ರಾಜಕಾರಣಿಗಳು, ನ್ಯಾಯಾಧೀಶರ ವಿರುದ್ಧ ನಡೆದಿದೆ ಎನ್ನಲಾಗುತ್ತಿರುವ ಹನಿಟ್ರ್ಯಾಪ್ ಕುರಿತಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಲಾಯರ್​ ವಿನಯ್ ಕುಮಾರ್ ಸಿಂಗ್​​ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ನೀವು ಜಾರ್ಖಂಡ್​​ನವರು. ಕರ್ನಾಟಕದ ಪ್ರಕರಣಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್​ಸೆನ್ಸ್​(ರಾಜಕೀಯ ಅಸಂಬದ್ಧ)ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್​ಗಳು ಏಕೆ ಹನಿಟ್ರ್ಯಾಪ್​​ಗೆ ಒಳಗಾಗುತ್ತಾರೆ? ಅದನ್ನು ಜಡ್ಜ್​ಗಳು ನೋಡಿಕೊಳ್ಳುತ್ತಾರೆ. ನಿಮಗೇನು ಸಂಬಂಧ ಎಂದು ಕಿಡಿಕಾರಿತು.

ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಯತ್ನದ ವಿಚಾರ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

Read More
Next Story