
ಸುಪ್ರೀಂ ಕೋರ್ಟ್
Honey Trap | ಹನಿಟ್ರ್ಯಾಪ್ ಆರೋಪ: ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್
ರಾಜಕಾರಣಿಗಳು, ನ್ಯಾಯಾಧೀಶರ ಮೇಲೆ ಹನಿಟ್ರ್ಯಾಪ್ ಕುರಿತಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಲಾಯರ್ ವಿನಯ್ ಕುಮಾರ್ ಸಿಂಗ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕದಲ್ಲಿ ನ್ಯಾಯಾಧೀಶರು ಮತ್ತು ಜನಪ್ರತಿನಿಧಿಗಳ ಹನಿಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸೋಮವಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.
ರಾಜಕಾರಣಿಗಳು, ನ್ಯಾಯಾಧೀಶರ ವಿರುದ್ಧ ನಡೆದಿದೆ ಎನ್ನಲಾಗುತ್ತಿರುವ ಹನಿಟ್ರ್ಯಾಪ್ ಕುರಿತಂತೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಲಾಯರ್ ವಿನಯ್ ಕುಮಾರ್ ಸಿಂಗ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಬುಧವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನೀವು ಜಾರ್ಖಂಡ್ನವರು. ಕರ್ನಾಟಕದ ಪ್ರಕರಣಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್ಸೆನ್ಸ್(ರಾಜಕೀಯ ಅಸಂಬದ್ಧ)ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್ಗಳು ಏಕೆ ಹನಿಟ್ರ್ಯಾಪ್ಗೆ ಒಳಗಾಗುತ್ತಾರೆ? ಅದನ್ನು ಜಡ್ಜ್ಗಳು ನೋಡಿಕೊಳ್ಳುತ್ತಾರೆ. ನಿಮಗೇನು ಸಂಬಂಧ ಎಂದು ಕಿಡಿಕಾರಿತು.
ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಯತ್ನದ ವಿಚಾರ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.