CM Siddaramaiah instructs to issue notice to DDPIs of districts that scored less than 60% in SSLC
x

ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ದ್ವೇಷ ಭಾಷಣ ಮಾಡುವವರ ವಿರುದ್ಧ ದೂರು ದಾಖಲಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ?, ತಕ್ಷಣ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶನಿವಾರ(ಮೇ31) ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿ, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ, ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸಂಬಂಧ ಕಾನೂನು ತಿದ್ದುಪಡಿ ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

2023ರಲ್ಲಿ 6,767 ಪ್ರಕರಣಗಳು, 2024ರಲ್ಲಿ 4,188 ಪ್ರಕರಣಗಳು ದಾಖಲಾಗಿವೆ. ಈ ವರ್ಷ ಇದುವರೆಗೆ 1,793 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಗಳಲ್ಲಿ ಮಾದಕ ದ್ರವ್ಯ ದಂಧೆಯನ್ನು ಮಟ್ಟ ಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕಾಯ್ದೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ. ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದರು.

ಜಿಲ್ಲಾಧಿಕಾರಿಗಳು ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಗೆ ಎಲ್ಲಾ ಸಹಕಾರ ನೀಡಬೇಕು. ಗೂಂಡಾ ಕಾಯ್ದೆಯಡಿ ಬಾಕಿಯಿರುವ ಎಲ್ಲಾ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

Read More
Next Story