ನೀರಿನ ಹಾಹಾಕಾರ | ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್ ಸರ್ಕಾರದ ವಶಕ್ಕೆ: ಡಿಸಿಎಂ ಡಿ ಕೆ ಶಿವಕುಮಾರ್
x
ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಕೆಶಿ ಹೇಳಿದ್ದಾರೆ.

ನೀರಿನ ಹಾಹಾಕಾರ | ಬೆಂಗಳೂರಿನ ಕೊಳವೆಬಾವಿ ನೀರು ಪೂರೈಕೆ ಟ್ಯಾಂಕರ್ ಸರ್ಕಾರದ ವಶಕ್ಕೆ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


Click the Play button to hear this message in audio format

ಬೆಂಗಳೂರು, ಮಾ. 02: "ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಸದಾಶಿವನಗರದ ಬಳಿ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ.

ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ.

ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಅಭಾವ ನೀಗಿಸುತ್ತೇವೆ. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದರು.

Read More
Next Story