ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
x
ಗದಗ ನಗರಸಭೆ ಉಪಾಧ್ಯಕ್ಷೆ ಕುಟುಂಬ

ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಗುರುವಾರ ತಡರಾತ್ರಿ ದುರಂತ ಸಂಭವಿಸಿದೆ


ಗದಗ ನಗರದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಗದಗ ನಗರದ ದಾಸರ ಓಣಿಯಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಗದಗ - ಬೆಟಗೇರಿ ನಗರಸಭೆಯ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ಕು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಗದಗ ನಗರಸಭೆಯ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ (27), ಪರಶುರಾಮ (55), ಪತ್ನಿ ಲಕ್ಷ್ಮೀ (45) ಹಾಗೂ ಪುತ್ರಿ ಆಕಾಂಕ್ಷಾ (16) ಎನ್ನುವವರನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲ್ಲಲಾಗಿದೆ.

ನಗರಸಭೆ ಉಪಾಧ್ಯಕ್ಷೆ ಸುನಂದಾ ಅವರ ಪುತ್ರ ಕಾರ್ತಿಕ್ ಅವರ ಮದುವೆ ಹಿನ್ನೆಲೆಯಲ್ಲಿ ಕುಟುಂಬದವರು ಕೊಪ್ಪಳದಿಂದ ಗದಗ ನಗರಕ್ಕೆ ಆಗಮಿಸಿದ್ದರು. ಗದಗ ನಗರದಲ್ಲಿರುವ ಕುಟುಂಬದವರ ಮನೆಯಲ್ಲಿ ಉಳಿದುಕೊಂಡಿದ್ದರು. ಗುರುವಾರ ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀ ಅವರ ಹುಟ್ಟುಹಬ್ಬವನ್ನೂ ಆಚರಿಸಲಾಗಿತ್ತು. ಎಲ್ಲರೂ ಸಂತೋಷದಿಂದಲೇ ಸಂಬಂಧಿಕರ ಮನೆಯ ಮೊದಲನೇ ಮಹಡಿಯಲ್ಲಿರುವ ಕೋಣೆಯಲ್ಲಿ ಮಲಗಿದ್ದರು.

ಪರಶುರಾಮ ಅವರ ಕುಟುಂಬ ಮಲಗಿದ್ದ ಕೋಣೆಯ ಗಾಜಿಗೆ ಮೊದಲು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಏನಾಗುತ್ತಿದೆ ಎಂದು ನೋಡುವ ಮೊದಲೇ ಕಿಟಕಿಯನ್ನು ಒಡೆದು ಒಳಗೆ ಬಂದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಕಿರುಚಾಟದ ಸದ್ದು ಕೇಳಿ ಒಳಗೆ ಬಂದ ಕಾರ್ತಿಕ್ ಬಾಕಳೆ ಅವರನ್ನೂ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮನೆಯ ಮಾಲೀಕ ಪ್ರಕಾಶ್ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಿಲನ್ನು ದುಷ್ಕರ್ಮಿಗಳು ತಟ್ಟಿದ್ದಾರೆ. ಆದರೆ, ಅವರು ಬಾಗಿಲು ತೆಗೆಯದೆ ಪೊಲೀಸರಿಗೆ ಕರೆ ಮಾಡಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ಶ್ವಾನದಳ, ವಿಧಿವಿಜ್ಞಾನ ಪ್ರಯೋಗಾಲದವರು, ಎಸ್ಪಿ ಬಿಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿದಂತೆ ಹಲವು ಹಿರಿಯರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

Read More
Next Story