ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆ| ವರ್ಷದಲ್ಲಿ 34,916 ಅಪಘಾತ; 9943 ಸಾವು
x

ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆ| ವರ್ಷದಲ್ಲಿ 34,916 ಅಪಘಾತ; 9943 ಸಾವು


ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ʻಅಧಿಕಾರಿಗಳ ಉದಾಸೀನದಿಂದ ಜನರ ಅಮೂಲ್ಯ ಪ್ರಾಣ ಹೋದರೆ ಸಹಿಸಲ್ಲ, ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಬೇಕು‌ʼ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿರುವ ಅವರು, ʻʻಅಪಘಾತಗಳ ನಿಯಂತ್ರಣಕ್ಕೆ ಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದಕೆಲಸ ಮಾಡಬೇಕು. ಅಪಘಾತ ವಲಯ ಮತ್ತು ಬ್ಲಾಕ್ ಸ್ಪಾಟ್ ಗುರುತಿಸಿ ಕೈಕಟ್ಟಿ ಕುಳಿತರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ರಸ್ತೆಗಳಿಗೆ ಇಳಿದು ಸುರಕ್ಷತೆ ಕ್ರಮಗಳನ್ನು ಪರಿಶೀಲಿಸಬೇಕುʼʼ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಗಳಲ್ಲಿರುವ ರಸ್ತೆ ಸುರಕ್ಷಾ ಸಮಿತಿಗಳು ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

ʻʻಕಂದಾಯ, ಪೊಲೀಸ್‌, ಸಾರಿಗೆ, ನಗರ ಪಾಲಿಕೆ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ. ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು. ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ. ನಮ್ಮ ನಿರ್ಲಕ್ಷ್ಯದಿಂದ ಜನರ ಪ್ರಾಣ ಹಾನಿ ಉಂಟಾಗುವುದನ್ನು ಸಹಿಸಲು ಸಾಧ್ಯವಿಲ್ಲ. ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್‌ ವ್ಯವಸ್ಥೆ, ಟ್ರಾಮಾ ಸೆಂಟರ್‌ ನೆಟ್‌ವರ್ಕ್‌ ಮಾಡಬೇಕುʼʼ ಎಂದರು.

Read More
Next Story