ರಾಜ್ಯದಲ್ಲೊಬ್ಬರು ಗೂಂಡಾ ಇದ್ದಾರೆ! ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಯಾರ ಕುರಿತು?
x
ಸಾಂಧರ್ಭಿಕ ಚಿತ್ರ

'ರಾಜ್ಯದಲ್ಲೊಬ್ಬರು ಗೂಂಡಾ ಇದ್ದಾರೆ'! ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ಯಾರ ಕುರಿತು?

ರಾಜ್ಯದಲ್ಲಿ ಯಾರೂ ಗೂಂಡಾ ಇದ್ದಾರೆ ಅಂತಾ ಎಲ್ಲರಿಗೂ ಗೊತ್ತಿದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಯು ನೇರವಾಗಿ ಯಾರ ಹೆಸರನ್ನೂ ಪ್ರಸ್ತಾಪಿಸದಿದ್ದರೂ, ಅದರ ಸಂದರ್ಭ ಮತ್ತು ಡಿ.ಕೆ. ಶಿವಕುಮಾರ್ ಅವರ ಹಿಂದಿನ ಕೆಲವು ಹೇಳಿಕೆಗಳಿಗೆ ಪೂರಕವಾಗಿದೆ.


ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ಕಾಲ್ತುಳಿತ ದುರಂತದ ನಂತರ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.

ಈ ಮಧ್ಯೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, "ರಾಜ್ಯದಲ್ಲೊಬ್ಬರು ಗೂಂಡಾ ಇದ್ದಾರೆ" ಎಂಬ ಹೇಳಿಕೆ ನೀಡಿದ್ದಾರೆ. ಅವರು ಯಾರ ಕುರಿತು ಇಂಥದ್ದೊಂದು ಹೇಳಿಕೆ ನೀಡಿದ್ದಾರೆ ಎಂಬುದಾಗಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.

ನಟ ಡಾ. ರಾಜ್‌ಕುಮಾರ್ ಅವರ ನಿಧನದ ಬಳಿಕ ನಡೆದ ಅಂತ್ಯಕ್ರಿಯೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. "ರಾಜ್‌ಕುಮಾರ್ ಅಂತ್ಯಕ್ರಿಯೆ ವೇಳೆ ಪೂರ್ವ ಸಿದ್ಧತೆಗೆ ನಮ್ಮ ಬಳಿ ಸಮಯವೇ ಸಿಗಲಿಲ್ಲ. ಕೆಲ ಗೂಂಡಾಗಳು ಸೀಮೆ ಎಣ್ಣೆ ತಂದು ಏನು ಅನಾಹುತ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಒಬ್ಬರು ಗೂಂಡಾ ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ" ಎಂದು ಹೇಳಿಕೆ ನೀಡಿದ್ದಾರೆ. .

ಯಾರ ಕುರಿತು ಈ ಟೀಕೆ?

"ರಾಜ್ಯದಲ್ಲಿ ಯಾರೂ ಗೂಂಡಾ ಇದ್ದಾರೆ ಅಂತಾ ಎಲ್ಲರಿಗೂ ಗೊತ್ತಿದೆ" ಎಂಬ ಕುಮಾರಸ್ವಾಮಿ ಅವರ ಹೇಳಿಕೆಯು ನೇರವಾಗಿ ಯಾರ ಹೆಸರನ್ನೂ ಪ್ರಸ್ತಾಪಿಸದಿದ್ದರೂ, ಅದರ ಸಂದರ್ಭ ಮತ್ತು ಡಿ.ಕೆ. ಶಿವಕುಮಾರ್ ಅವರ ಹಿಂದಿನ ಕೆಲವು ಹೇಳಿಕೆಗಳಿಗೆ ಪೂರಕವಾಗಿದೆ. ಹೀಗಾಗಿ ಇದು ಡಿಕೆಶಿ ಅವರನ್ನು ಉದ್ದೇಶಿಸಿ ನೀಡಿದ ಪರೋಕ್ಷ ಟೀಕೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕಣ್ಣೀರಿನ ಡ್ರಾಮಾ

ಡಿಕೆಶಿ ಅವರು ಐಪಿಎಲ್ ಕಪ್ ಗೆದ್ದ ಆರ್‌ಸಿಬಿ ತಂಡವನ್ನು ನೇರವಾಗಿ ಸ್ವಾಗತಿಸಿ, ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದು ಮತ್ತು ನಂತರ ಕಣ್ಣೀರು ಹಾಕಿದ್ದು ಕೇವಲ "ಡ್ರಾಮಾ" ಎಂದು ಕುಮಾರಸ್ವಾಮಿ ಟೀಕಿಸಿದ್ದರು. ಅಲ್ಲದೆ, ಆರ್‌ಸಿಬಿ ವಿಜಯೋತ್ಸವ ಸಮಾರಂಭದ ಆಯೋಜನೆಯಲ್ಲಿ ಡಿ.ಕೆ. ಶಿವಕುಮಾರ್ ಅವರೇ ಪ್ರಮುಖ ಪಾತ್ರ ವಹಿಸಿ‌ ದುರಂತಕ್ಕೆ ಕಾರಣವಾದ ́ರಾಕ್ಷಸʼ ಎಂಬ ಆರೋಪಗಳನ್ನೂ ಮಾಡಿದ್ದರು.

3.10 ಕ್ಕೆ ಒಬ್ಬ ಮೃತಪಟ್ಟಿದ್ದರೂ ಕಾರ್ಯಕ್ರಮ ಮುಂದವರಿಸಿದ್ದ ಸರ್ಕಾರ

ಕಾಲ್ತುಳಿತ ದುರಂತಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕ್ರಮದ ಆಯೋಜನೆಯಲ್ಲಿನ ಗೊಂದಲಗಳು, ಸರ್ಕಾರದ ನಿಧಾನಗತಿಯ ಪ್ರತಿಕ್ರಿಯೆ ಮತ್ತು ಸಚಿವರ ಮಕ್ಕಳ ಅಸಂಬದ್ಧ ವರ್ತನೆಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ.

ವಿಧಾನಸೌಧ ಮುಂದೆ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡಿದ ರೀತಿ ನೋಡಿದರೆ ಗೊತ್ತಾಗುತ್ತದೆ ಎಷ್ಟು ಗೊಂದಲ ಇದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಕಾರ್ಯಕ್ರಮದ ಯೋಜನೆಯಲ್ಲಿ ಸ್ಪಷ್ಟತೆಯ ಕೊರತೆ ಮತ್ತು ಅವ್ಯವಸ್ಥೆ ಕಾಣುತ್ತದೆ. ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳು ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಎರಡೂ ಕಡೆ ಕಾರ್ಯಕ್ರಮಕ್ಕೆ ಅವಕಾಶ ಕೋರಿದ್ದು, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರವಾಗದಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಅವರು ಪರೋಕ್ಷವಾಗಿ ಆರೋಪಿಸಿದ್ದಾರೆ.

Read More
Next Story