There is no difference of opinion between DCM DKSH and me: CM Siddaramaiah clarifies
x

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. 

ಡಿಕೆಶಿ, ನನ್ನ ಮಧ್ಯೆ ಭಿನ್ನಾಭಿಪ್ರಾಯವಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದು ಶಾಸಕರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


ವಿಪಕ್ಷಗಳು ಏನೇ ಹೇಳಿದರೂ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರಲಿದೆ. ನನ್ನ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಅಂತಹ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಇಬ್ಬರೂ ಒಟ್ಟಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ(ಜೂ.30) ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ರಾಜ್ಯಕ್ಕೆ ಭೇಟಿ ನೀಡಿದ್ದು ಶಾಸಕರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಈ ಹಿಂದೆಯೂ ಹಲವಾರು ಬಾರಿ ಈ ರೀತಿ ಹೇಳಿದ್ದಾರೆ. ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮುಲು ಸೋತಿದ್ದಾರೆ. ಅವರು ಹೇಗೆ ಸರ್ಕಾರದ ಕುರಿತು ಭವಿಷ್ಯ ನುಡಿಯಲು ಸಾಧ್ಯ ಎಂದು ಪ್ರಶ್ನಿಸಿದರು.

ಇತ್ತೀಚೆಗೆ ಸ್ವಪಕ್ಷೀಯ ಸಚಿವರು ಸೇರಿದಂತೆ ವಿಪಕ್ಷ ನಾಯಕರು ಸೆಪ್ಟೆಂಬರ್‌ ಅಥವಾ ನವೆಂಬರ್‌ ವೇಳೆಗೆ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿದ್ದು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರ ಹೇಳಿಕೆ ನಿರ್ಲಕ್ಷಿಸಿ ಎಂದು ಸ್ವತಃ ಸಿಎಂ ಹೇಳಿಕೆ ನೀಡಿದ್ದರು.

ಮುಂದಿನ ದಿನಗಳಲ್ಲಿ ಕೆಪಿಸಿಸಿ ಸೇರಿದಂತೆ ಅಲ್ಪ ಪ್ರಮಾಣದಲ್ಲಿ ಬದಲಾವಣೆ ಆಗಬಹುದು ಎಂದು ಲೋಕಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದರು.

ಈ ಮಧ್ಯೆ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದರೂ ಸ್ವಪಕ್ಷಿಯ ಶಾಸಕರಿಗೆ ಅನುದಾನ ದೊರೆಯುತ್ತಿಲ್ಲ. ಹಲವು ಇಲಾಖೆಗಳು ಶಾಸಕರ ಗಮನಕ್ಕೆ ತರದೆ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿವೆ. ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಿದೆ ಎಂದು ಆಳಂದ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್‌. ಪಾಟೀಲ್‌ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಇತ್ತೀಚೆಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

Read More
Next Story