ಕೋಲಾರದಲ್ಲಿ ಎಟಿಎಂನಿಂದ 27 ಲಕ್ಷ ರೂ. ದೋಚಿದ ಕಳ್ಳರು
x

ಎಟಿಎಂನಿಂದ ಹಣ ದೋಚಿದ ಕಳ್ಳರು 

ಕೋಲಾರದಲ್ಲಿ ಎಟಿಎಂನಿಂದ 27 ಲಕ್ಷ ರೂ. ದೋಚಿದ ಕಳ್ಳರು

ಸ್ಥಳಕ್ಕೆ ಕೋಲಾರ ಎಸ್‍ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆ ಸಮೀಪದ ಸಹಕಾರ ನಗರದಲ್ಲಿರುವ ಎಸ್‌ಬಿಐ ಎಟಿಎಂನಿಂದ ಬರೋಬ್ಬರಿ 27.62 ಲಕ್ಷ ರೂಪಾಯಿ ಹಣವನ್ನು ಕಳ್ಳರು ದೋಚಿದ್ದಾರೆ. ಈ ಘಟನೆ ಸೋಮವಾರ ಬೆಳಗಿನ ಜಾವ 4:30ರ ಸುಮಾರಿಗೆ ನಡೆದಿದೆ.

ಭದ್ರತಾ ಸಿಬ್ಬಂದಿ ಇಲ್ಲದ ಎಟಿಎಂಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು, ತಮ್ಮ ಗುರುತು ಮರೆಮಾಚಲು ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಬಣ್ಣವನ್ನು ಸಿಂಪಡಿಸಿದ್ದಾರೆ. ಎಟಿಎಂ ಒಳಗಿದ್ದ ಎಚ್ಚರಿಕೆ ವ್ಯವಸ್ಥೆಗಳು ಕಾರ್ಯನಿರ್ವಹಿಸದಿರುವುದು ಕಳ್ಳರಿಗೆ ಇನ್ನಷ್ಟು ಸಹಕಾರಿಯಾಗಿದೆ. ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಎಟಿಎಂ ಯಂತ್ರವನ್ನು ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದ್ದಾರೆ.

ತನಿಖೆ ಪ್ರಗತಿಯಲ್ಲಿದೆ

ಘಟನೆ ನಡೆದ ಸ್ಥಳಕ್ಕೆ ಕೋಲಾರ ಎಸ್ಪಿ ನಿಖಿಲ್, ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎಟಿಎಂ ದರೋಡೆ ಪ್ರಕರಣಗಳು

ಇತ್ತೀಚೆಗೆ ಕರ್ನಾಟಕದಲ್ಲಿ ಎಟಿಎಂ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಟಿಎಂಗಳಿಗೆ ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹ ಕೇಳಿಬಂದಿದೆ. ಕೆಲವು ತಿಂಗಳ ಹಿಂದೆ ಕಲಬುರಗಿಯಲ್ಲಿ ಗ್ಯಾಸ್ ಕಟ್ಟರ್‌ನಿಂದ ಎಟಿಎಂ ಒಡೆದು ₹18 ಲಕ್ಷ ದೋಚಲಾಗಿತ್ತು. ಆ ಘಟನೆಯಲ್ಲಿಯೂ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಇರಲಿಲ್ಲ. ಅದಕ್ಕೂ ಮೊದಲು, ಬೀದರ್‌ನಲ್ಲಿ ಎಟಿಎಂ ವಾಹನ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಸುಮಾರು ₹1 ಕೋಟಿ ಹಣದೊಂದಿಗೆ ಪರಾರಿಯಾಗಿದ್ದ ಘಟನೆಯೂ ನಡೆದಿತ್ತು. ಈ ಸರಣಿ ದರೋಡೆಗಳು ಎಟಿಎಂ ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

Read More
Next Story