Three killed as KSRTC bus collides with lorry loaded with sheep
x

ಅಪಘಾತದ ರಭಸಕ್ಕೆ ಜಖಂಗೊಂಡಿರುವ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌

ನೆಲಮಂಗಲ ಬಳಿ ಕುರಿ ತುಂಬಿದ್ದ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ, ಮೂವರು ಸಾವು

ಲಾರಿಯಲ್ಲಿದ್ದ ಸೀನಪ್ಪ(50), ನಝಿರ್‌ ಅಹ್ಮದ್‌(36) ಹಾಗೂ ಆನಂದ್‌(42) ಮೃತಪಟ್ಟಿದ್ದು, ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಕುರಿ ಮತ್ತು ಮೇಕೆಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಕೆಎಸ್​ಆರ್​​ಟಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮುಧೋಳದಿಂದ ಬೆಂಗಳೂರಿಗೆ ಕುರಿ ಮತ್ತು ಮೇಕೆಗಳನ್ನು ಸಾಗಿಸುತ್ತಿದ್ದ ಲಾರಿಯ ಟೈಯರ್ ಪಂಚರ್ ಆಗಿತ್ತು. ಹೀಗಾಗಿ, ಲಾರಿಯನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ, ವೇಗವಾಗಿ ಬಂದ ಕೆಎಸ್​ಆರ್​​ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಈ ದುರ್ಘಟನೆಯಲ್ಲಿ ಲಾರಿಯಲ್ಲಿದ್ದ ಸೀನಪ್ಪ (50), ನಝೀರ್ ಅಹ್ಮದ್ (36) ಮತ್ತು ಆನಂದ್ (42) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದೇ ರೀತಿಯ ಘಟನೆಗಳ ಸರಣಿ:

ಕಳೆದ ರಾತ್ರಿಯಷ್ಟೇ (ಶುಕ್ರವಾರ), ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಇದೇ ರೀತಿಯ ಭೀಕರ ಅಪಘಾತ ಸಂಭವಿಸಿತ್ತು. ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಕೆಎಸ್​ಆರ್​​ಟಿಸಿ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಬಾಗಲಕೋಟೆ ಮೂಲದ ಮೂವರು ಮೃತಪಟ್ಟಿದ್ದರು.

Read More
Next Story