ಕೌನ್ಸೆಲಿಂಗ್​ ಮೂಲಕ ಸಬ್‌ ರಿಜಿಸ್ಟ್ರಾರ್ ವರ್ಗಾವಣೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
x

ಕೌನ್ಸೆಲಿಂಗ್​ ಮೂಲಕ ಸಬ್‌ ರಿಜಿಸ್ಟ್ರಾರ್ ವರ್ಗಾವಣೆ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ


ಇಂದು (ಗುರುವಾರ) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಕೌನ್ಸೆಲಿಂಗ್​ ಮೂಲಕ ಸಬ್‌ರಿಜಿಸ್ಟ್ರಾರ್ ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಭೆ ಬಳಿಕ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌.ಕೆ.ಪಾಟೀಲ್​ ಅವರು ಸಮ್ಮೇಶಲನ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ಕೌನ್ಸೆಲಿಂಗ್​ ಮೂಲಕ ಸಬ್‌ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ವರ್ಗಾವಣೆ ಬಗ್ಗೆ ಸಂಪುಟ ಸಭೆಯಲ್ಲಿ ತಗೆದುಕೊಂಡ ಮಹತ್ವದ ನಿರ್ಧಾರದ ಕುರಿತು ಮಾತನಾಡಿದ ಅವರು, ʻʻಇದುವರೆಗೂ ನೇರವಾಗಿ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಮಾಡಲಾಗುತ್ತಿತ್ತು. ಈಗಿನಿಂದಲೇ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಸರ್ಕಾರ ನಿರ್ಧರಿಸಿದೆ. ಆ ಮೂಲಕ ಅಕ್ರಮ ಹಾಗೂ ಭ್ರಷ್ಟಾಚಾರ ತಡೆಗಟ್ಟಲು ವರ್ಗಾವಣೆಗೆ ಹೊಸ ನೀತಿ ಜಾರಿ ಮಾಡಲಾಗಿದೆ. ಈ ವರ್ಷದಿಂದಲೇ ಕೌನ್ಸೆಲಿಂಗ್​ ಮೂಲಕ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆʼʼ ಎಂದು ತಿಳಿಸಿದರು.

ಸಬ್‌ರಿಜಿಸ್ಟ್ರಾರ್ ಹಂತಕ್ಕಿಂತ ಕೆಳ ಅಧಿಕಾರಿಗಳ ವರ್ಗಾವಣೆಗೂ ಕೌನ್ಸೆಲಿಂಗ್ ಮಾಡಲಾಗುವುದು. ಬೆಂಗಳೂರಿನಲ್ಲಿ 5 ವರ್ಷಕ್ಕಿಂತ ಹೆಚ್ಚು ಅವಧಿ ಕೆಲಸ ಮಾಡಿದರೆ ಹೊರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ನೋಂದಣಿ ಇಲಾಖೆಯಲ್ಲಿ ವರ್ಗಾವಣೆ ಪಾರದರ್ಶಕ ಮಾಡಲು ಕೌನ್ಸೆಲಿಂಗ್ ಪದ್ದತಿಯನ್ನು ಜಾರಿಗೆ ತರುತ್ತಿದ್ದೇವೆ. ಎಫ್.ಡಿಎ ಹೊರತುಪಡಿಸಿ ಸಬ್ ರಿಜಿಸ್ಟ್ರಾರ್​​ಗಳಿಗೆ ವರ್ಗಾವಣೆ ಆಗಲಿದೆ. ಕಾರ್ಪೋರೇಷನ್ ಏರಿಯಾದಲ್ಲಿ ಇರುವ ಸಬ್ ರಿಜಿಸ್ಟ್ರಾರ್​ಗಳಿಗೆ ವರ್ಗಾವಣೆ ಕೌನ್ಸೆಲಿಂಗ್ ಅನ್ನು ಇಲಾಖೆಯೇ ನೋಡಿಕೊಳ್ಳಲಿದೆ. ಆ ಮೂಲಕ ಪಾರದರ್ಶಕತೆ ತರಲು ಇದರಿಂದ ಸಾಧ್ಯವಾಗುತ್ತದೆ. ಶೋಷಣೆ ಮುಕ್ತ ವ್ಯವಸ್ಥೆ ರೂಪುಗೊಳ್ಳಲು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಸಂಪುಟ ಸಭೆಯಲ್ಲಿ ತೆಗೆದುಕೊಂಡ ಹಲವು ಪ್ರಮುಖ ನಿರ್ಣಯಗಳು ಇಂತಿವೆ..:

  • ಹಿಂದುಳಿದ ವರ್ಗಗಳ ಇಲಾಖೆಯಡಿ ಭಕ್ತವತ್ಸಲ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.
  • ಸರ್ಕಾರಿ ನೌಕರರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಲಾಗಿತ್ತು. ಗೈಡ್‌ಲೈನ್ಸ್‌ಗಳಿಗೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ಮಾಡಲಾಗಿದೆ.
  • ಬಾಗಲಕೋಟೆ ರನ್ನ ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ ಒಪ್ಪಿಗೆ, ಇಂದಿರಾ ಕ್ಯಾಂಟೀನ್ ಕಿಚನ್‌ಗಳಿಗೆ ಅಡುಗೆ ಉಪಕರಣ ಖರೀದಿಗೆ 84.58 ಕೋಟಿ ರೂ. ಅನುಮೋದನೆ ನೀಡಲಾಗಿದೆ.
  • ಒಳನಾಡು ಕೆರೆ, ಜಲಾಶಯಗಳಲ್ಲಿ ಮೀನು ಸಾಕಣೆಗೆ ಟೆಂಡರ್​ ಟೆಂಡರ್ ಮುಂದುವರಿಕೆಗೆ ಡಿಸಿಗಳಿಗೆ ಹೊಣೆ ನೀಡಲಾಗಿದೆ.
  • 100 ಹಾಸಿಗೆಗಳ ಸಾಮರ್ಥ್ಯದ 7 ತಾಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕೆ 256 ಕೋಟಿ ರೂ. ಅಂದಾಜು ಮೊತ್ತ, 15 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲು ಅಸ್ತು ನೀಡಲಾಗಿದೆ.
  • ಕೆಇಎ ಕಟ್ಟಡ ಮೇಲ್ದರ್ಜೆಗೇರಿಸಲು 30 ಕೋಟಿ ರೂ. ಅನುಮೋದಿಸಲಾಗಿದೆ. ಕಾನೂನು ಮತ್ತು ನೀತಿಗೆ (ಹೊಸ ಕಾನೂನು ನೀತಿ), ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘಕ್ಕೆ 20 ಗುಂಟೆ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ.
  • ಗಣಿಗಾರಿಕೆ ಪರಿಣಾಮ ಬೀರುವ ವಲಯದಲ್ಲಿ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆಗೆ ನೋಡಲ್ ಏಜೆನ್ಸಿ ನೇಮಕಕ್ಕೆ ಕ್ಯಾಬಿನೆಟ್ ಅನುಮೋದಿಸಿದೆ.
  • ಮಾಜಿ ಶಾಸಕ ವಿಎಸ್ ಪಾಟೀಲ್​ಗೆ ಜಿ ಕ್ಯಾಟಗರಿ ಸೈಟ್ ನೀಡಿಕೆಗೆ ಶುದ್ದ ಕ್ರಯ ಪತ್ರ ನೀಡಲು ಕ್ಯಾಬಿನೆಟ್ ಅನುಮೋದಿಸಿದೆ.
Read More
Next Story