Save Karnataka Tigers| ಎಂ.ಎಂ.ಹಿಲ್ಸ್ ನಲ್ಲಿ ಐದು ಹುಲಿಗಳ ಸಾವು ಪ್ರಕರಣ: ಇಬ್ಬರು ಆರೋಪಿಗಳು ಬಂಧನ
x

ಮೃತಪಟ್ಟಿರುವ ಹುಲಿಗಳು 

Save Karnataka Tigers| ಎಂ.ಎಂ.ಹಿಲ್ಸ್ ನಲ್ಲಿ ಐದು ಹುಲಿಗಳ ಸಾವು ಪ್ರಕರಣ: ಇಬ್ಬರು ಆರೋಪಿಗಳು ಬಂಧನ

ಮಾದ ಅಲಿಯಾಸ್ ಮಾದುರಾಜುಗೆ ಸೇರಿದ್ದ ಕೆಂಚಿ ಎಂಬ ಹೆಸರಿನ ಹಸುವನ್ನು ಹುಲಿ ಬಲಿ ಪಡೆದಿತ್ತು. ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡು ಮಾದ ಕಣ್ಣೀರಿಟ್ಟಿದ್ದ. ಬಳಿಕ ಹಸು ಕೊಂದ ಹುಲಿ ಕೊಲ್ಲಲು ಇಬ್ಬರು ನಿರ್ಧರಿಸಿದ್ದರು.


ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಮಾದ ಅಲಿಯಾಸ್ ಮಾಧುರಾಜು ಹಾಗೂ ನಾಗರಾಜ್ ಬಂಧಿತರು. ಪೊಲೀಸರು ಮತ್ತು ಅರಣ್ಯ ಸಿಬ್ಬಂದಿಗಳಿಂದ ವಿಚಾರಣೆ ನಡಲಾಗುತ್ತಿದೆ.

ಮಾದ ಅಲಿಯಾಸ್ ಮಾಧುರಾಜುಗೆ ಸೇರಿದ್ದ ಕೆಂಚಿ ಹೆಸರಿನ ಹಸುವನ್ನು ಹುಲಿ ಬಲಿ ಪಡೆದಿತ್ತು. ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡು ಮಾದ ಕಣ್ಣೀರಿಟ್ಟಿದ್ದ. ಬಳಿಕ ಹಸು ಕೊಂದ ಹುಲಿ ಕೊಲ್ಲಲು ಇಬ್ಬರು ನಿರ್ಧರಿಸಿದ್ದರು. ಹಾಗಾಗಿ ಹುಲಿ ಕೊಲ್ಲಲು ಕ್ರಿಮಿನಾಶಕ ಕೂಡ ತಂದಿದ್ದರು.

ನಾಗರಾಜ್ ಮೃತ ಹಸುವಿಗೆ ಕ್ರಿಮಿನಾಶಕ ಹಾಕಿ ಬಂದಿದ್ದ. ಮರುದಿನ ವಿಷಪೂರಿತ ಹಸುವಿನ ಮಾಂಸ ತಿಂದು ಹುಲಿ ಮರಿಗಳು ಸತ್ತಿದ್ದವು. ಇತ್ತ ಹುಲಿಗಳು ಸತ್ತಿದ್ದನ್ನು ನೋಡಿ ಮಾಧುರಾಜು ಸಂತಸ ಪಟ್ಟಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಪ್ರಕರಣ ಬೆನ್ನಲ್ಲೇ ಮಾದ ಅಲಿಯಾಸ್ ಮಾಧುರಾಜು ಪರಾರಿಯಾಗಿದ್ದ. ಕೊಳ್ಳೇಗಾಲ ಡಿವೈಎಸ್​​ಪಿ ಧರ್ಮೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೊಪ್ಪ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಮಾಧುರಾಜುನನ್ನು ಬಂಧಿಸಿದ್ದಾರೆ.

ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಮಾದ ತಪ್ಪೊಪ್ಪಿಕೊಂಡಿದ್ದು, ತನ್ನ ಹಸು ಕೊಂದಿದ್ದಕ್ಕೆ ವಿಷ ಹಾಕಿರುವುದಾಗಿ ಹೇಳಿದ್ದಾರೆ. ಆದರೆ, ಮಾದ ಅವರ ತಂದೆ ಶಿವಣ್ಣ ತನ್ನ ಪುತ್ರನನ್ನು ರಕ್ಷಿಸಲು ಶಿವಣ್ಣ ನಾನೇ ವಿಷ ಹಾಕಿರುವುದಾಗಿ ಹೇಳಿಕೆ ನೀಡಿದ್ದರು. ಹಾಗಾಗಿ ಮಾದ ಅವರ ತಂದೆ ಶಿವಣ್ಣನನ್ನು ಪ್ರಕರಣದಿಂದ ಕೈಬಿಡಲಾಗಿದೆ.

ತನಿಖಾ ತಂಡದಲ್ಲಿ ಬದಲಾವಣೆ

ಹುಲಿಗಳ ಸಾವಿನ ತನಿಖೆಗೆ ರಚಿಸಿರುವ ತನಿಖಾ ತಂಡದಲ್ಲಿ ಕೊಂಚ‌ ಬದಲಾವಣೆ ಮಾಡಲಾಗಿದೆ.

ಉನ್ನತ ಮಟ್ಟದ ತನಿಖಾ ತಂಡದ ಮುಖ್ಯಸ್ಥರಾಗಿ ಪಿಸಿಸಿಎಫ್ ರವಿ ಬದಲಾಗಿ ಎಪಿಸಿಸಿಎಫ್​ (APCCF) ಕುಮಾರ್ ಪುಷ್ಕರ್​​ ಅವರನ್ನು ನೇಮಕ ಮಾಡಲಾಗಿದೆ. ಪಿಸಿಸಿಎಫ್ ರವಿ ಕೋರಿಕೆ ಮೇರೆಗೆ ತನಿಖಾ ತಂಡದ ಮುಖ್ಯಸ್ಥರ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Read More
Next Story