
Today's news Feb 28: ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭ-ಸಿಎಂ ಶುಭ ಹಾರೈಕೆ
ರಾಜ್ಯ, ಭಾರತ ಮತ್ತು ಜಗತ್ತಿನಾದ್ಯಂತ ನಡೆಯುತ್ತಿರುವ ಅತ್ಯಂತ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ನೋಟ ಇಲ್ಲಿದೆ.
ಇಂದು ಶನಿವಾರ ಫೆಬ್ರುವರಿ 28, 2026. ಭಾರತದ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದಿನ ಪಮುಖ ಮತ್ತು ಟ್ರೆಂಡಿಂಗ್ ಸುದ್ದಿಗಳ ಸಮಗ್ರ ನೋಟ ಇಲ್ಲಿದೆ.
Live Updates
- 28 Feb 2026 9:21 AM IST
ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭ-ಸಿಎಂ ಶುಭ ಹಾರೈಕೆ
ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
— Siddaramaiah (@siddaramaiah) February 28, 2026
ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ. #2ndPUCexam - 28 Feb 2026 7:20 AM IST
ಕೇರಳದ ಮರ್ಯಾದೆಗೆ ಧಕ್ಕೆ ತರುವುದು ನಮ್ಮ ಉದ್ದೇಶವಲ್ಲ: 'ದಿ ಕೇರಳ ಸ್ಟೋರಿ-2' ನಿರ್ಮಾಪಕ ವಿಪುಲ್ ಶಾ
ಕೇರಳ ಹೈಕೋರ್ಟ್ 'ದಿ ಕೇರಳ ಸ್ಟೋರಿ 2: ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ಹಸಿರು ನಿಶಾನೆ ತೋರಿಸಿದ ಬೆನ್ನಲ್ಲೇ, ನಿರ್ಮಾಪಕ ವಿಪುಲ್ ಶಾ ಅವರು ಈ ಚಿತ್ರವು ಕೇರಳ ರಾಜ್ಯವನ್ನಾಗಲಿ ಅಥವಾ ಅಲ್ಲಿನ ಜನತೆಯನ್ನಾಗಲಿ ಅವಮಾನಿಸುವ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಪಿ.ವಿ. ಬಾಲಕೃಷ್ಣನ್ ಅವರ ಪೀಠವು ಈ ಹಿಂದೆ ಚಿತ್ರದ ಪ್ರದರ್ಶನಕ್ಕೆ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿದೆ.
ಈ ಕುರಿತು ಮಾತನಾಡಿದ ಶಾ, ಕೇರಳವು ಅತ್ಯಂತ ಸುಂದರವಾದ ರಾಜ್ಯವಾಗಿದ್ದು, ಚಿತ್ರವು ಕೇವಲ ಕೇರಳ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಕೆಲವು ಅಪರಾಧಿಗಳ ಕೃತ್ಯಗಳನ್ನು ಹಾಗೂ ಮತಾಂತರದಂತಹ ಗಂಭೀರ ವಿಷಯಗಳನ್ನು ಎತ್ತಿ ತೋರಿಸುತ್ತದೆಯೇ ಹೊರತು ರಾಜ್ಯದ ಘನತೆಗೆ ಧಕ್ಕೆ ತರುವುದಿಲ್ಲ ಎಂದು ತಿಳಿಸಿದ್ದಾರೆ. ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನದ ಈ ಚಿತ್ರವು ಮೂವರು ಹಿಂದೂ ಮಹಿಳೆಯರು ಮುಸ್ಲಿಂ ಪುರುಷರನ್ನು ವಿವಾಹವಾಗಿ ಮತಾಂತರಕ್ಕೆ ಒಳಗಾಗುವ ಕಥೆಯನ್ನು ಹೊಂದಿದ್ದು, ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

