ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ವಿಚಾರಣೆಗೆ ಬಿಎಸ್‌ವೈ ಹಾಜರು
x
ಬಿ.ಎಸ್‌.ಯಡಿಯೂರಪ್ಪ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಿಐಡಿ ವಿಚಾರಣೆಗೆ ಬಿಎಸ್‌ವೈ ಹಾಜರು

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್‌.ಯಡಿಯೂರಪ್ಪ ಇಂದು ಸಿಐಡಿ ವಿಚಾರಣೆಗೆ ಹಾಜಾರಾಗಿದ್ದಾರೆ.


Click the Play button to hear this message in audio format

ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್‌.ಯಡಿಯೂರಪ್ಪ ಇಂದು ಸಿಐಡಿ ವಿಚಾರಣೆಗೆ ಹಾಜಾರಾಗಿದ್ದಾರೆ.

ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. ಇದಾದ ಬಳಿಕ ಸಿಐಡಿ ಬಿಎಸ್‌ವೈ ಅವರನ್ನು ಕರೆದು ವಾಯ್ಸ್ ಸ್ಯಾಂಪಲ್ ಪಡೆದು ತನಿಖಾಧಿಕಾರಿಗಳು ಅವರನ್ನು ಕಳುಹಿಸಿಕೊಟ್ಟಿದ್ದಾರೆ.

ಹೆಚ್ಚಿನ ವಿಚಾರಣೆಗೆ ಬಿಎಸ್‌ವೈಗೆ ಸಿಐಡಿ ನೋಟಿಸ್ ನೀಡಿತ್ತು. ಬಿಎಸ್‌ವೈ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿದ್ದರಿಂದ ಸಿಐಡಿ ವಾರೆಂಟ್ ಜಾರಿ ಮಾಡಿ ಬಂಧನಕ್ಕೆ ಮುಂದಾಗಿತ್ತು. ಈ ವೇಳೆ ಕೋರ್ಟ್ ಬಂಧಿಸದಂತೆ ತಡೆ ನೀಡಿ ಇಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದರಿಂದ ಸಿಐಡಿ ಮುಂದೆ ಬಿಎಸ್‌ವೈ ಇಂದು ತನಿಖೆಗೆ ಹಾಜರಾಗಿದ್ದಾರೆ.

ಪ್ರಕರಣದ ಹಿನ್ನೆಲೆ

“ಅಪ್ರಾಪ್ತ ಬಾಲಕಿಯನ್ನು ತಮ್ಮ ಖಾಸಗಿ ಕೋಣೆಗೆ ಕರೆದೊಯ್ದು ಎದೆ ಭಾಗವನ್ನು ಹಿಸುಕಿ ಲೈಂಗಿಕ ಕಿರುಕುಳ ನೀಡಿದ್ದಾರೆ” ಎಂದು ಸಂತ್ರಸ್ತೆಯ ತಾಯಿ ಮಾರ್ಚ್‌ 14ರಂದು ಸದಾಶಿವನಗರ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

ತಮ್ಮ ಮಗಳ ಮೇಲೆ ಈ ಹಿಂದೆ ನಡೆದಿದ್ದ ಅತ್ಯಾಚಾರ ಪ್ರಕರಣವೊಂದರಲ್ಲಿ ಪೊಲೀಸರು ದೂರು ದಾಖಲಿಸಿಕೊಂಡು ಕ್ರಮ ಜರುಗಿಸಿಲ್ಲ. ಹಾಗಾಗಿ ನೀವು ರಾಜ್ಯ ಸರ್ಕಾರಕ್ಕೆ ಈ ವಿಷಯದಲ್ಲಿ ಮಾತನಾಡಿ ಪ್ರಕರಣದ ತನಿಖೆ ನಡೆಸಿ ನ್ಯಾಯ ಕೊಡಿಸಲು ಸಹಾಯ ಮಾಡಿ ಎಂದು ನೊಂದ ತಾಯಿ ಮಾಜಿ ಮುಖ್ಯಮಂತ್ರಿಗಳ ಬೆಂಗಳೂರಿನ ನಿವಾಸಕ್ಕೆ ನೆರವು ಯಾಚಿಸಿ ಹೋಗಿದ್ದಾಗ ಬಿ ಎಸ್‌ ಯಡಿಯೂರಪ್ಪ ಈ ದೌರ್ಜನ್ಯ ನಡೆಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಹೈಕೋರ್ಟ್‌ ಆದೇಶ

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ ಎಸ್‌ ಯಡಿಯೂರಪ್ಪ ಅವರಿಗೆ ಇತ್ತೀಚೆಗೆ ರಿಲೀಫ್‌ ಸಿಕ್ಕಿದ್ದು, ಅವರ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್‌ಗೆ ತಡೆ ನೀಡಿರುವ ರಾಜ್ಯ ಹೈಕೋರ್ಟ್‌, ಅವರನ್ನು ಬಂಧಿಸದಂತೆ ಪೊಲೀಸರಿಗೆ ಆದೇಶಿಸಿತ್ತು. ಅಲ್ಲದೆ, ಸಿಐಡಿ ನೀಡಿರುವ ಸೂಚನೆಯಂತೆ ಜೂ.17 ರಂದು ಪ್ರಕರಣದ ವಿಚಾರಣೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದೂ ಕೋರ್ಟ್‌ ಯಡಿಯೂರಪ್ಪ ಅವರಿಗೆ ಸೂಚಿಸಿತ್ತು.

ಪ್ರಕರಣ ರದ್ದು ಕೋರಿ ಮತ್ತು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಶುಕ್ರವಾರ ಈ ಆದೇಶ ನೀಡಿತ್ತು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿಗೆ ನ್ಯಾಯ ಕೊಡಿಸುವಂತೆ ನೆರವು ಕೋರಿ ಕಳೆದ ಫೆಬ್ರವರಿಯಲ್ಲಿ ಭೇಟಿಯಾದಾಗ, ಯಡಿಯೂರಪ್ಪ ಅವರು ತಮ್ಮ ಕೋಣೆಯೊಳಗೆ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಬಾಲಕಿಯ ತಾಯಿ ಮಾರ್ಚ್‌ 14 ರಂದು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವಹಿಸಿತ್ತು.

ಆದರೆ, ಪ್ರಕರಣ ದಾಖಲಾಗಿ ಮೂರು ತಿಂಗಳು ಸಮೀಪಿಸಿದರೂ ಸಿಐಡಿ ಆರೋಪಿಯ ವಿಚಾರಣೆ ನಡೆಸದೇ ಇರುವುದು, ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಫೂಟೇಜ್‌ ಸಂಗ್ರಹಿಸದೇ ಇರುವುದು ಸೇರಿದಂತೆ ಹಲವು ಲೋಪಗಳನ್ನು ಪ್ರಶ್ನಿಸಿ, ಆರೋಪಿಯ ಬಂಧನಕ್ಕೆ ಆದೇಶಿಸುವಂತೆ ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್‌ ಮೊರೆ ಹೋಗಿದ್ದರು. ಆ ಬೆಳವಣಿಗೆಯ ಬೆನ್ನಲ್ಲೇ ಆರೋಪಿ ಬಿ ಎಸ್‌ ಯಡಿಯೂರಪ್ಪ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೊಟೀಸ್‌ ಜಾರಿ ಮಾಡಿದ ಬಳಿಕ, ಜಾಮೀನು ಕೋರಿ ಯಡಿಯೂರಪ್ಪ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

Read More
Next Story