Actor Darshan Case | ನಟ ದರ್ಶನ್‌ ಪ್ರಕರಣ ಕುರಿತು ನಟಿ ರಚಿತಾ ರಾಮ್‌ ಮೊದಲ ಪ್ರತಿಕ್ರಿಯೆ
x
ನಟಿ ರಚಿತಾ ರಾಮ್‌

Actor Darshan Case | ನಟ ದರ್ಶನ್‌ ಪ್ರಕರಣ ಕುರಿತು ನಟಿ ರಚಿತಾ ರಾಮ್‌ ಮೊದಲ ಪ್ರತಿಕ್ರಿಯೆ

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದನ್ನು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ


Click the Play button to hear this message in audio format

Actor Darshan Case | ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ದರ್ಶನ್‌ ಬಂಧನದ ಕುರಿತು ಕಿಚ್ಚ ಸುದೀಪ್‌, ಉಪೇಂದ್ರ, ಜಗ್ಗೇಶ್‌ ಮುಂತಾದ ಸೆಲೆಬ್ರಿಟಿಗಳು ತಮ್ಮದೇ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಇದೀಗ ಸ್ಯಾಂಡಲ್‌ವುಡ್‌ ನಟಿ, ದರ್ಶನ್‌ ಅವರ ʼಬುಲ್‌ಬುಲ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ ಸೋಷಿಯಲ್‌ ಮೀಡಿಯಾದಲ್ಲಿ ಘಟನೆ ಬಗ್ಗೆ ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.

ʼʼನಮಸ್ಕಾರʼʼ ಎಂದು ತಮ್ಮ ನೋಟ್‌ ಅನ್ನು ಆರಂಭಿಸಿರುವ ಅವರು ʼʼಇದನ್ನು ನಾನು ನಟಿಯಾಗಿ ಅಲ್ಲ, ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆʼʼ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ʼʼಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭವಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆʼʼ ಎಂದು ಹೇಳಿದ್ದಾರೆ.

ಮುಂದುವರಿದು, ʼʼನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ. ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆʼʼ ಎಂದು ರಚಿತಾ ರಾಮ್‌ ಬರೆದುಕೊಂಡಿದ್ದಾರೆ.

ರಚಿತಾ ರಾಮ್‌ ಮತ್ತು ದರ್ಶನ್‌ ʼಬುಲ್‌ಬುಲ್‌ʼ, ʼಅಂಬರೀಷʼ, ʼಕ್ರಾಂತಿʼ ಮುಂತಾದ ಚಿತ್ರಗಳಲ್ಲಿ ಜತೆಯಾಗಿ ನಟಿಸಿದ್ದಾರೆ. 2013ರಲ್ಲಿ ತೆರೆಕಂಡ ʼಬುಲ್‌ಬುಲ್‌ʼ ಚಿತ್ರದ ಮೂಲಕ ರಚಿತಾ ರಾಮ್‌ ಸಿನಿರಂಗಕ್ಕೆ ಪರಿಚಿತರಾಗಿದ್ದರು.

Read More
Next Story