ಸಂಸತ್ತಿನಲ್ಲಿ ರಾಹುಲ್‌ ಗಾಂಧಿ ಹಿಂದೂ ಹೇಳಿಕೆ|  ರಾಜ್ಯ ಕಾಂಗ್ರೆಸ್‌ ಬೆಂಬಲ; ಬಿಜೆಪಿ ವಿರುದ್ಧ ವಾಗ್ದಾಳಿ
x
ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‌ ಬಾಬು

ಸಂಸತ್ತಿನಲ್ಲಿ ರಾಹುಲ್‌ ಗಾಂಧಿ "ಹಿಂದೂ" ಹೇಳಿಕೆ| ರಾಜ್ಯ ಕಾಂಗ್ರೆಸ್‌ ಬೆಂಬಲ; ಬಿಜೆಪಿ ವಿರುದ್ಧ ವಾಗ್ದಾಳಿ

ರಾಜ್ಯದಲ್ಲಿ ಯತ್ನಾಳರಂತ ನಾಯಕರಿಗೆ ಉತ್ತರ ನೀಡಲು ಸಾಧ್ಯವಾಗದೆ ಕದ್ದು ಓಡಾಡುವ ವಿಜಯೇಂದ್ರ ರಾಹುಲ್ ಗಾಂಧೀ ಅವರ ಟೀಕೆಗೆ ಮುಂದಾಗಿರುವುದು ಅವರ ಫಲಾಯನ ವಾಡದ ಸಂಕೇತವಾಗಿದೆ. ಎ. ಕೆ. ಸುಬ್ಬಯ್ಯ ಅವರಿಂದ ನಳಿನ್ ಕುಮಾರ್ ಕಟೀಲ್ ವರೆಗೆ ಬಿಜೆಪಿ ಯಲ್ಲಿ ಅನೇಕರು ಅಧ್ಯಕ್ಷರಾಗಿದ್ದು, ವಿಜಯೇಂದ್ರರಂತಹ ವೈಫಲ್ಯದ ನಾಯಕರನ್ನು ಬಿಜೆಪಿ ಯಾವತ್ತೂ ಕಂಡಿರಲಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ.


ಕಳೆದ ಹತ್ತು ವರ್ಷಗಳಿಂದ ನಿರಂಕುಶ ಅಧಿಕಾರದ ಅಡಿಯಲ್ಲಿ ವಿರೋಧ ಪಕ್ಷಗಳ ಧ್ವನಿಯನ್ನು ಮಾನ್ಯ ಮಾಡದೆ ಇಡೀ ಆಡಳಿತ ವ್ಯವಸ್ಥೆಗೆ ಮಸಿ ಬಳಿದಿರುವ ಮೋದಿ ಸರ್ಕಾರ, ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ ಕೊಡುವ ಬದಲು ವಿರೋಧ ಪಕ್ಷದ ನಾಯಕರ ಮಾತುಗಳನ್ನು ಅಲ್ಲೆಗೆಳೆಯುವ ಉದ್ಧಟತನ ತೋರುತ್ತಿದೆ ಕಾಂಗ್ರೆಸ್‌ ಟೀಕಿಸಿದೆ.

ತನ್ನ ತಪ್ಪುಗಳನ್ನು ತಿದ್ದುಕೊಂಡು ಜನರ ಧ್ವನಿಗೆ ಮಾನ್ಯತೆ ಕೊಡುವ ಬದಲು ವಿರೋಧ ಪಕ್ಷದ ನಾಯಕರ ಮಾತುಗಳನ್ನು ಅಲ್ಲೆಗೆಳೆಯುವ ಉದ್ಧಟತನ ತೋರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್‌ ಬಾಬು ಕೇಂದ್ರ ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕಾಂಗ್ರಸ್ ಪಕ್ಷದ ನಾಯಕರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರೂ ಆದ ರಾಹುಲ್ ಗಾಂಧಿ ಅವರು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಾಯದ ಸಂದರ್ಭದಲ್ಲಿ ಅತ್ಯಂತ ಸಮರ್ಥವಾಗಿ ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ” ಎಂದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರರವರು ರಾಹುಲ್ ಗಾಂಧಿ ಅವರ ಭಾಷಣವನ್ನು ಆಧಾರ ರಹಿತ ಸುಳ್ಳು ಆರೋಪ ಎಂದು ಟೀಕಿಸಿದ್ದಾರೆ. ಮೂರು ಹೆತ್ತವಳು ಆರು ಹೆತ್ತವಳಿಗೆ ಹೇಳಿದಂತೆ ಎನ್ನುವ ಗಾದೆ ಮಾತಿಗೆ ಅನುಗುಣವಾಗಿ ವಿಜಯೇಂದ್ರ ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಪ್ರಯತ್ನ ಮಾಡಿದ್ದಾರೆ. ರಾಹುಲ್ ಗಾಂಧಿ ರವರು 5ನೇ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದು ಭಾರತ್ ಜೋಡೋ/ ನ್ಯಾಯಯತ್ರೆ ಮುಖಾಂತರ ದೇಶದ ಉದ್ದಗಲಕ್ಕೂ ಪಾದಯಾತ್ರೆ ಮಾಡಿ ಜನಸಾಮಾನ್ಯರ ನಾಡಿಮಿಡಿತವನ್ನು ಅರಿತಿದ್ದಾರೆ ಎಂದು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕರು ಹಿಂದೂ ಧರ್ಮ ಯಾವತ್ತೂ ದ್ವೇಷ ಮತ್ತು ಭಯವನ್ನು ಹರಡುವುದಿಲ್ಲ ಎಂದು ಹೇಳಿದ್ದಾರೆ. ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ವ್ಯವಸ್ಥಿತವಾಗಿ ಈ ಕೆಲಸ ಮಾಡುತ್ತಿದೆ ಮತ್ತು ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡುತ್ತಿದೆ. ದುರ್ಬಲರ, ದಲಿತರ ಮತ್ತು ಅಲ್ಪ ಸಂಖ್ಯಾತರ ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ. ರಾಹುಲ್ ಗಾಂಧಿ ರವರು ಸರ್ಕಾರದ ವೈಫಲ್ಯಗಳನ್ನು ಬೆತ್ತಲೆಗೊಳಿಸಿದರೆ ಉತ್ತರಿಸಲಾಗದ ಮೋದಿ ಸರ್ಕಾರ ಧರ್ಮದ ಹೆಸರಿನಲ್ಲಿ ರಕ್ಷಣೆ ಪಡೆದುಕೊಳ್ಳಲು ಮುಂದಾಗಿದೆ ಎಂದರು.

ರಾಜ್ಯದಲ್ಲಿ ಯತ್ನಾಳರಂತ ನಾಯಕರಿಗೆ ಉತ್ತರ ನೀಡಲು ಸಾಧ್ಯವಾಗದೆ ಕದ್ದು ಓಡಾಡುವ ವಿಜಯೇಂದ್ರ ರಾಹುಲ್ ಗಾಂಧೀ ಅವರ ಟೀಕೆಗೆ ಮುಂದಾಗಿರುವುದು ಅವರ ಫಲಾಯನ ವಾಡದ ಸಂಕೇತವಾಗಿದೆ. ಎ. ಕೆ. ಸುಬ್ಬಯ್ಯ ಅವರಿಂದ ನಳಿನ್ ಕುಮಾರ್ ಕಟೀಲ್ ವರೆಗೆ ಬಿಜೆಪಿ ಯಲ್ಲಿ ಅನೇಕರು ಅಧ್ಯಕ್ಷರಾಗಿದ್ದು, ವಿಜಯೇಂದ್ರರಂತಹ ವೈಫಲ್ಯದ ನಾಯಕರನ್ನು ಬಿಜೆಪಿ ಯಾವತ್ತೂ ಕಂಡಿರಲಿಲ್ಲ. ಬಿಜೆಪಿ ಗುಂಪುಗಾರಿಕೆಯೇ ಇವರ ನಾಯಕತ್ವದಲ್ಲಿ ಮಿತಿ ಮೀರಿದ್ದು, ಇವರು ಮತ್ತು ಆರ್. ಅಶೋಕ್ ರವರು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಇಂತಹ ಪೊಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ. ಲೋಕಸಭೆಯ ಸಮರ್ಥ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧೀಯವರನ್ನು ಟೀಕೆ ಮಾಡಿ ಬಿ. ವೈ. ವಿಜಯೇಂದ್ರ ರವರು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳುವುದಾದರೆ ಕಾಂಗ್ರೆಸ್ ಪಕ್ಷ ಅವರಿಗೆ ಶುಭ ಹಾರೈಸುತ್ತದೆ ಎಂದು ಅವರು ತಿಳಿಸಿದ್ದಾರೆ.

Read More
Next Story