ಪ್ರಜ್ವಲ್‌ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಎಸ್‌ಐಟಿಗೆ ಸಿಎಂ ಸೂಚನೆ
x
ಸಿದ್ದರಾಮಯ್ಯ ಅವರು ಎಸ್​ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು

ಪ್ರಜ್ವಲ್‌ ಪ್ರಕರಣ: ಕಟ್ಟುನಿಟ್ಟಿನ ಕ್ರಮಕ್ಕೆ ಎಸ್‌ಐಟಿಗೆ ಸಿಎಂ ಸೂಚನೆ


ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್​ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರಕರಣ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಖಡಕ್ ಸೂಚನೆ ನೀಡಿದರು

ಪ್ರಮುಖ ಆರೋಪಿ ಪ್ರಜ್ವಲ್​ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು.‌

Read More
Next Story