‌ಮನುವಾದಿಗಳಿಂದ ನನಗೆ ಎನ್ಕೌಂಟರ್ ಬೆದರಿಕೆ: ಸಚಿವ ಪ್ರಿಯಾಂಕ್ ಖರ್ಗೆ
x
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ

‌ಮನುವಾದಿಗಳಿಂದ ನನಗೆ ಎನ್ಕೌಂಟರ್ ಬೆದರಿಕೆ: ಸಚಿವ ಪ್ರಿಯಾಂಕ್ ಖರ್ಗೆ

ನನ್ನನ್ನು ಎನ್‌ಕೌಂಟರ್‌ ಮಾಡುವುದಾಗಿ ಬಿಜೆಪಿಯ ಮನುವಾದಿಗಳು ಜೀವ ಬೆದರಿಕೆ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ.


Click the Play button to hear this message in audio format

ಕಲಬುರಗಿ: ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್‌ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಗುರುವಾರ ( ಮಾ.28) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕೆಟ್ಟ ಪದಗಳನ್ನು ಬಳಸಿ ನನ್ನ ಕುಟುಂಬ ಸದಸ್ಯರನ್ನು ನಿಂದಿಸಿದ್ದಾರೆ. ಜಾತಿ ಹೆಸರನ್ನು ಸಹ ಉಲ್ಲೇಖ ಮಾಡಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದೆ. ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಈ ಬೆದರಿಕೆ ಪತ್ರವನ್ನು ಕಳುಹಿಸಲಾಗಿದೆ. ವಿಧಾನಸೌಧದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.

ಬಿಜೆಪಿಯ ಮುಖಂಡರು ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್‌ ಮಾಡುತ್ತಿದ್ದಾರೆ ಎಂದು ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು.

Read More
Next Story