Actor Darshan Case | ನಟ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ
x
ನಟ ಶಿವರಾಜ್​ಕುಮಾರ್​

Actor Darshan Case | ನಟ ಶಿವರಾಜ್‌ಕುಮಾರ್‌ ಮೊದಲ ಪ್ರತಿಕ್ರಿಯೆ

ನಿರ್ಮಾಪಕರ ಸಂಘದ ಹೊಸ ಕಟ್ಟಡದ ಉದ್ಘಾಟನೆ ಬಳಿಕ ಶಿವರಾಜ್​ಕುಮಾರ್​ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಚಾರದ ಕುರಿತು ಪ್ರತಿಕ್ರಿಯಿಸಿದರು.


Click the Play button to hear this message in audio format

ಕನ್ನಡ ಚಿತ್ರರಂಗದ ಸ್ಟಾರ್​ ನಟ ದರ್ಶನ್​ ಅವರು ಕೊಲೆ ಪ್ರಕರಣದ ಆರೋಪಿಗಾಗಿ ಜೈಲು ಪಾಲಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್​ವುಡ್​ನ ಹಿರಿಯ ನಟ ಶಿವರಾಜ್​ಕುಮಾರ್​ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ಮಾಪಕರ ಸಂಘದ ಹೊಸ ಕಟ್ಟಡದ ಉದ್ಘಾಟನೆ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡುವಾಗ ಈ ವಿಚಾರದ ಕುರಿತು ಪ್ರತಿಕ್ರಿಯಿಸಿದರು.

‘ಇಂಥ ಘಟನೆಗಳು ಆಗುತ್ತವೆ. ಏನೂ ಮಾಡೋಕೆ ಆಗಲ್ಲ. ಹಣೆಬರಹ ಅಂತ ಒಂದು ಇರುತ್ತದೆ. ಆ ವಿಚಾರ ಬಂದಾಗ ನಾವು ಏನೂ ಮಾಡೋಕೆ ಆಗುವುದಿಲ್ಲ. ಆದರೆ, ಮಾತಾಡೋಕೆ ಹೋದರೂ, ನಾವು ಮಾಡುತ್ತಿರುವುದು ಸರಿಯಾಗಿ ಇದೆಯಾ ಎಂಬುದನ್ನು ಮೊದಲು ಯೋಚನೆ ಮಾಡಬೇಕು. ಅದನ್ನು ಹೊರತುಪಡಿಸಿ ನಾವು ಏನೂ ಹೇಳೋಕೆ ಆಗಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತ ತನ್ನ ಪ್ರೇಯಸಿ ಪವಿತ್ರಾ ಗೌಡ ಎಂಬಾಕೆಗೆ ಅಶ್ಲೀಲ ಸಂದೇಶ ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಅಪಹರಣ ಮಾಡಿ ಬೆಂಗಳೂರಿಗೆ ಕರೆತಂದು ಶೆಡ್‌ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್​ ಹಾಗೂ ಗ್ಯಾಂಗ್​ ಮೇಲಿದೆ.

ತನಿಖೆ ನಡೆಯುತ್ತಿದ್ದು, ದರ್ಶನ್‌ ಸೇರಿದಂತೆ ಪ್ರಮುಖ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಹಾಗಾಗಿ ಸದ್ಯ ನಟ ದರ್ಶನ್‌, ಆತನ ಪ್ರೇಯಸಿ ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳೂ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

Read More
Next Story