ತುಮಕೂರು: ಸುಟ್ಟ ಕಾರಿನಲ್ಲಿ ಬೆಳ್ತಂಗಡಿಯ ಮೂವರ ಶವ ಪತ್ತೆ!
x
ಸುಟ್ಟು ಕರಕಲಾದ ಕಾರಿನಲ್ಲಿ ಮೂವರ ಶವ ಪತ್ತೆ

ತುಮಕೂರು: ಸುಟ್ಟ ಕಾರಿನಲ್ಲಿ ಬೆಳ್ತಂಗಡಿಯ ಮೂವರ ಶವ ಪತ್ತೆ!


Click the Play button to hear this message in audio format

ತುಮಕೂರಿನ ಕುಚ್ಚಂಗಿ ಕೆರೆಯ ಮೇಲಿರುವ ಮೆಸ್ಕ್ವೈಟ್ ತೋಪಿನಲ್ಲಿ ಭಸ್ಮವಾಗಿರುವ ಸ್ಥಿತಿಯಲ್ಲಿ ಮಾರುತಿ ಸ್ವಿಫ್ಟ್‌ ಕಾರು ಪತ್ತೆಯಾಗಿದ್ದು, ಅದರಲ್ಲಿ ಮೃತದೇಹಗಳು ಪತ್ತೆಯಾಗಿತ್ತು. ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮೃತರು ದಕ್ಷಿಣ ಕನ್ನಡ ಜಿಲ್ಲೆಯವರು

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಡ ಗ್ರಾಮದ ಟಿಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮಡಡ್ಕ ನಿವಾಸಿ ಇಸಾಕ್ (56), ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲ ಗ್ರಾಮದ ಇಮ್ತಿಯಾಝ್ (34) ಎಂದು ಗುರುತಿಸಲಾಗಿದೆ.

ಕೊಲೆ ಶಂಕೆ

ಕಾರಿನ ಡಿಕ್ಕಿಯಲ್ಲಿ ಎರಡು ಶವಗಳು ಮತ್ತು ಹಿಂಬದಿ ಸೀಟಿನಲ್ಲಿ ಒಂದು ಶವ ಪತ್ತೆಯಾಗಿದ್ದರಿಂದ ಇದು ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ. ಬೆಳ್ತಂಗಡಿಯಿಂದ ಐವರು ಕಾರನ್ನು ಬಾಡಿಗೆಗೆ ಪಡೆದಿದ್ದರು, ಅದರಲ್ಲಿ ಮೂವರನ್ನು ಕೊಲೆ ಮಾಡಲಾಗಿದೆ.

ಕೆಎ43 ರಿಜಿಸ್ಟ್ರೇಷನ್‌ ನಂಬರಿನ ಎಸ್‌ಪ್ರೆಸ್‌ ಕಾರು ರಫೀಕ್‌ ಎಂಬುವವರಿಗೆ ಸೇರಿದ್ದೆಂದು ತಿಳಿದುಬಂದಿದೆ. ಯಾವ ವಿಷಯಕ್ಕೆ ಕೊಲೆ ನಡೆದಿರಬಹುದು ಎಂದು ಪೊಲೀಸ್‌ ತನಿಖೆಯಲ್ಲಿ ತಿಳಿದುಬರಬೇಕಾಗಿದೆ.

ಐದು ಜನರು ಕಾರಿನಲ್ಲಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇದೀಗ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಐಜಿಪಿ ರವಿಕಾಂತೇಗೌಡ, ತುಮಕೂರು ಎಸ್‌ಪಿ ಅಶೋಕ್ ಕೆವಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶ್ವಾನದಳ ಹಾಗೂ ಎಫ್‌ಎಸ್‌ಎಲ್‌ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಕೋರಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More
Next Story