ಬೋರ್ಡ್‌ ಪರೀಕ್ಷೆಗೆ ಹೋಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಕಾರು  ಅಪಘಾತದಲ್ಲಿ ಸಾವು
x
ಬೋರ್ಡ್‌ ಪರೀಕ್ಷೆಗೆ ಹೋಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೋರ್ಡ್‌ ಪರೀಕ್ಷೆಗೆ ಹೋಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಕಾರು ಅಪಘಾತದಲ್ಲಿ ಸಾವು

ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


Click the Play button to hear this message in audio format

ಶಹಜಹಾನ್‌ಪುರ, ಫೆ 27: ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಈ ನಾಲ್ವರು ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೆ ಹಾಜರಾಗಲು ಕಾರಿನಲ್ಲಿ ಜೈತಿಪುರದ ಶಾಲೆಗೆ ಹೋಗುತ್ತಿದ್ದರು. ವಾಹನವು ಮರಕ್ಕೆ ಡಿಕ್ಕಿ ಹೊಡೆದು ಜರವಾವ್ ಗ್ರಾಮದ ಬಳಿಯ ಕಂದಕಕ್ಕೆ ಬಿದ್ದಿದೆ ಎಂದು ಹೆಚ್ಚುವರಿ ಎಸ್ಪಿ (ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ.

ಅನುರಪ್ ಖುಷ್ವಾಹ (15), ಅನುರಾಗ್ ಶ್ರೀವಾಸ್ತವ (14), ಪ್ರತಿಷ್ಠಾ ಮಿಶ್ರಾ (15) ಸ್ಥಳದಲ್ಲೇ ಮೃತಪಟ್ಟರೆ, ಮೋಹಿನಿ ಮೌರ್ಯ (16) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಗಾಯಗೊಂಡಿರುವ ಇತರ ಆರು ಮಂದಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

Read More
Next Story