ಸನ್‌ರೈಸರ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್‌ಸಿಬಿಗೆ ಶುಭ ಹಾರೈಸಿದ ವಿಜಯ್‌ ಮಲ್ಯ
x

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ರಜತ್ ಪಾಟೀದಾರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಡುವ ನಿರೀಕ್ಷೆಯಿದೆ. 

ಸನ್‌ರೈಸರ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಆರ್‌ಸಿಬಿಗೆ ಶುಭ ಹಾರೈಸಿದ ವಿಜಯ್‌ ಮಲ್ಯ

ನಮ್ಮ ಬೆಂಗಳೂರಿನ ಸಿಂಹಗಳಿಗೆ ದಿನ ಬಂದಿದೆ... ನಮ್ಮ ಸಿಂಹಗಳು... ಐಪಿಎಲ್ ಚಾಂಪಿಯನ್ಸ್. ಶುಭವಾಗಲಿ ಮತ್ತು ಧೈರ್ಯದಿಂದ ಆಟವಾಡಿ" ಎಂದು ಟ್ವೀಟ್ ಮಾಡುವ ಮೂಲಕ ಪಂದ್ಯಕ್ಕೂ ಮುನ್ನವೇ ಆರ್‌ಸಿಬಿ ತಂಡಕ್ಕೆ ಸ್ಫೂರ್ತಿ ತುಂಬಿದ್ದಾರೆ


Click the Play button to hear this message in audio format

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಉದ್ಘಾಟನಾ ಪಂದ್ಯದಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕಣಕ್ಕಿಳಿಯುತ್ತಿರುವ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಅದರ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಎಕ್ಸ್‌ (ಹಿಂದಿನ ಟ್ವಿಟರ್) ಮೂಲಕ ವಿಶೇಷ ಸಂದೇಶ ರವಾನಿಸಿದ್ದಾರೆ.

"ನಮ್ಮ ಬೆಂಗಳೂರಿನ ಸಿಂಹಗಳಿಗೆ ದಿನ ಬಂದಿದೆ... ನಮ್ಮ ಸಿಂಹಗಳು... ಐಪಿಎಲ್ ಚಾಂಪಿಯನ್ಸ್. ಶುಭವಾಗಲಿ ಮತ್ತು ಧೈರ್ಯದಿಂದ ಆಟವಾಡಿ" ಎಂದು ಟ್ವೀಟ್ ಮಾಡುವ ಮೂಲಕ ಪಂದ್ಯಕ್ಕೂ ಮುನ್ನವೇ ಆರ್‌ಸಿಬಿ ತಂಡಕ್ಕೆ ಸ್ಫೂರ್ತಿ ತುಂಬಿದ್ದಾರೆ.

ಹೊಸ ಮಾಲೀಕರಿಗೆ ಶುಭಾಶಯ ಮತ್ತು ಹಳೆಯ ನೆನಪುಗಳು

ಇತ್ತೀಚೆಗಷ್ಟೇ ಆರ್‌ಸಿಬಿ ಫ್ರಾಂಚೈಸಿಯನ್ನು ಆದಿತ್ಯಾ ಬಿರ್ಲಾ, ಟೈಮ್ಸ್ ಆಫ್ ಇಂಡಿಯಾ, ಬೋಲ್ಟ್ ವೆಂಚರ್ಸ್ ಹಾಗೂ ಬ್ಲ್ಯಾಕ್‌ಸ್ಟೋನ್ ಸಂಸ್ಥೆಗಳ ಒಕ್ಕೂಟವು ಸುಮಾರು 16,706 ಕೋಟಿ ರೂಪಾಯಿಗಳ ಬೃಹತ್ ಮೊತ್ತಕ್ಕೆ ಖರೀದಿಸಿತ್ತು. ಈ ಐತಿಹಾಸಿಕ ಮಾರಾಟದ ಬೆನ್ನಲ್ಲೇ ಭಾವುಕರಾಗಿದ್ದ ಮಲ್ಯ, "ನಾನು 2008ರಲ್ಲಿ 450 ಕೋಟಿ ರೂ. ನೀಡಿ ತಂಡವನ್ನು ಖರೀದಿಸಿದಾಗ ಹಲವರು ಇದು ಬರಿ ಪ್ರದರ್ಶನದ ಹೂಡಿಕೆ ಎಂದು ಲೇವಡಿ ಮಾಡಿದ್ದರು. ಆದರೆ ಇಂದು ಆ ಹೂಡಿಕೆ 16,500 ಕೋಟಿಗೂ ಅಧಿಕ ಮೌಲ್ಯಕ್ಕೆ ಬೆಳೆದಿರುವುದು ತೀವ್ರ ಹೆಮ್ಮೆ ತಂದಿದೆ" ಎಂದು ಸ್ಮರಿಸಿಕೊಂಡಿದ್ದಾರೆ. ಇದೇ ವೇಳೆ, ಯುವ ಆಟಗಾರನಾಗಿದ್ದಾಗ ವಿರಾಟ್ ಕೊಹ್ಲಿಯನ್ನು ತಂಡಕ್ಕೆ ಆಯ್ಕೆ ಮಾಡಿದ್ದನ್ನೂ ಅವರು ನೆನಪಿಸಿಕೊಂಡಿದ್ದು, "ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಒಂದು ಭಾಗವಾಗಿ ಉಳಿಯಲಿದೆ" ಎಂದು ಅಭಿಮಾನಿಗಳ ಬಳಿ ತಂಡವನ್ನು ಬೆಂಬಲಿಸುತ್ತಲೇ ಇರುವಂತೆ ಕೋರಿದ್ದಾರೆ.

ಬಲಿಷ್ಠ ಆರ್‌ಸಿಬಿ ಮತ್ತು ಸನ್‌ರೈಸರ್ಸ್‌ ಮುಖಾಮುಖಿ

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ತಂಡವು ರಜತ್ ಪಾಟೀದಾರ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿದ್ದು, ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಆಡುವ ನಿರೀಕ್ಷೆಯಿದೆ. ಗಾಯಾಳು ಜೋಶ್ ಹೇಜಲ್‌ವುಡ್ ಅನುಪಸ್ಥಿತಿಯಿಂದಾಗಿ ತಂಡದ ಬೌಲಿಂಗ್ ವಿಭಾಗ ಕೊಂಚ ದುರ್ಬಲವಾಗಿರುವಂತೆ ಕಂಡರೂ, ಜೇಕಬ್ ಡಫಿ ಮತ್ತು ಭುವನೇಶ್ವರ್ ಕುಮಾರ್ ಮೇಲಿನ ಭರವಸೆ ಹೆಚ್ಚಿದೆ. ಮತ್ತೊಂದೆಡೆ, ಸನ್‌ರೈಸರ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ಹೆಸರುವಾಸಿಯಾಗಿದ್ದು, ಕಳೆದ ಬಾರಿ ಇದೇ ಮೈದಾನದಲ್ಲಿ ಆರ್‌ಸಿಬಿ ವಿರುದ್ಧ 287 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಹೆನ್ರಿಕ್ ಕ್ಲಾಸೆನ್ ಅವರಂತಹ ಸ್ಫೋಟಕ ಬ್ಯಾಟರ್‌ಗಳನ್ನು ಹೊಂದಿರುವ ಸನ್‌ರೈಸರ್ಸ್, ಇಂದು ಭಾರಿ ಪೈಪೋಟಿ ನೀಡುವ ಸಾಧ್ಯತೆಯಿದೆ.

Read More
Next Story