ಹಾಕಿ ದಿಗ್ಗಜ  ಶ್ರೀಜೇಶ್ ಅವರಿಗೆ ಕೇರಳ ಸರ್ಕಾರದಿಂದ 2 ಕೋಟಿ ರೂ.
x

ಹಾಕಿ ದಿಗ್ಗಜ ಶ್ರೀಜೇಶ್ ಅವರಿಗೆ ಕೇರಳ ಸರ್ಕಾರದಿಂದ 2 ಕೋಟಿ ರೂ.


ತಿರುವನಂತಪುರಂ: ಹಾಕಿ ಆಟಗಾರ ಪಿ.ಆರ್. ಶ್ರೀಜೇಶ್ ಅವರಿಗೆ ಕೇರಳ ಸರ್ಕಾರ ಎರಡು ಕೋಟಿ ರೂ.ನಗದು ಬಹುಮಾನ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂಒ ಪ್ರಕಟಣೆ ತಿಳಿಸಿದೆ.

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಸದಸ್ಯರಾಗಿದ್ದ ಪಿ.ಆರ್. ಶ್ರೀಜೇಶ್, ಕೇರಳದವರು. ಹಾಕಿಯಲ್ಲಿ ದೇಶದ ಸತತ ಎರಡನೇ ಒಲಿಂಪಿಕ್ ಕಂಚು ಪದಕದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಅವರು, ಆಟಕ್ಕೆ ವಿದಾಯ ಹೇಳಿದ್ದಾರೆ.

Read More
Next Story