Namma Metro pays tribute to Mahatma Gandhi on Martyrs Day
x

ಮಹಾತ್ಮ ಗಾಂಧೀಜಿಗೆ ನಮನ ಸಲ್ಲಿಸಿರುವ ನಮ್ಮ ಮೆಟ್ರೋ 

ಹುತಾತ್ಮರ ದಿನದಂದು ಮಹಾತ್ಮ ಗಾಂಧಿ ನಮನ ಸಲ್ಲಿಸಿದ 'ನಮ್ಮ ಮೆಟ್ರೋ

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮನ ತ್ಯಾಗ ಮತ್ತು ಅಹಿಂಸಾ ತತ್ವವನ್ನು ಮೆಟ್ರೋ ನಿಗಮ ಸ್ಮರಿಸಿದೆ. ಬಿಎಂಆರ್‌ಸಿಎಲ್‌ನ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.


Click the Play button to hear this message in audio format

ಇಂದು (ಜ.30) ದೇಶಾದ್ಯಂತ ಹುತಾತ್ಮರ ದಿನಾಚರಣೆ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ಆಚರಿಸಲಾಗುತ್ತಿದೆ. ಈ ದಿನದಂದು ಬೆಂಗಳೂರು ಮೆಟ್ರೋ ರೈಲು ನಿಗಮ ಗಾಂಧೀಜಿಯವರನ್ನು ಸ್ಮರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ.

ಮಹಾತ್ಮ ಗಾಂಧಿಯವರ ಪುಣ್ಯತಿಥಿಯ ಅಂಗವಾಗಿ ಬಿಎಂಆರ್‌ಸಿಎಲ್ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ (ಎಕ್ಸ್‌) ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ಗಾಂಧೀಜಿಯವರ ಭಾವಚಿತ್ರದೊಂದಿಗೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸಂದೇಶವಿರುವ ಗ್ರಾಫಿಕ್ ಅನ್ನು ಪೋಸ್ಟ್ ಮಾಡಲಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮನ ತ್ಯಾಗ ಮತ್ತು ಅಹಿಂಸಾ ತತ್ವವನ್ನು ಮೆಟ್ರೋ ನಿಗಮ ಸ್ಮರಿಸಿದೆ. ಬಿಎಂಆರ್‌ಸಿಎಲ್‌ನ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ದೇಶಾದ್ಯಂತ ಆಚರಣೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾದ ಇಂದು (ಜ.30) ದೇಶಾದ್ಯಂತ 'ಹುತಾತ್ಮರ ದಿನ'ವನ್ನಾಗಿ ಆಚರಿಸಲಾಗುತ್ತಿದ್ದು, ದೇಶಬಾಂಧವರು ಬಾಪೂಜಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೆಹಲಿಯ ರಾಜ್‌ಘಾಟ್‌ನಲ್ಲಿರುವ ಗಾಂಧಿ ಸಮಾಧಿಗೆ ಗಣ್ಯರು ತೆರಳಿ ಪುಷ್ಪ ನಮನ ಸಲ್ಲಿಸಿದರು.

ಕರ್ನಾಟಕದಲ್ಲೂ ಹುತಾತ್ಮರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ರಾಜ್ಯದ ರಾಜಕೀಯ ಗಣ್ಯರು ಮಹಾತ್ಮನಿಗೆ ನಮನ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರು ಗಾಂಧಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. "ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ತತ್ವಗಳು ಇಂದಿನ ಪ್ರಕ್ಷುಬ್ಧ ಜಗತ್ತಿಗೆ ದಾರಿ ದೀಪ," ಎಂದು ಸ್ಮರಿಸಿದ ನಾಯಕರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆ ಮಾಡಿದರು. ಜಿಲ್ಲಾ ಮಟ್ಟದಲ್ಲೂ ಸಚಿವರು ಮತ್ತು ಶಾಸಕರು ಗಾಂಧಿ ಸ್ಮರಣೆಯಲ್ಲಿ ಭಾಗಿಯಾದರು.

Read More
Next Story