x

ಭಾರೀ ಮಳೆ- ತುಂಗಾ ಜಲಾಶಯದ 22 ಗೇಟ್‌ಗಳು ಓಪನ್, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗ ಅಕ್ಷರಶಃ ನಡುಗಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಹಲವು ಸೂಕ್ಷ್ಮ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


Click the Play button to hear this message in audio format

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗ ಅಕ್ಷರಶಃ ನಡುಗಿದೆ. ಶಿವಮೊಗ್ಗದ ತುಂಗಾ ಜಲಾಶಯದ ಎಲ್ಲಾ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನೀರು ಬಿಡಲಾಗುತ್ತಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಹಲವು ಸೂಕ್ಷ್ಮ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿ ವಾತಾವರಣ ಮುಂದುವರಿದಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More
Next Story