ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರ ಮುಷ್ಕರ: ಇಂದು ಮಹತ್ವದ ಸಭೆ
x

ಖಾಲಿ ಹುದ್ದೆಗಳ ಭರ್ತಿ, ವರ್ಗಾವಣೆ ನೀತಿ ಬದಲಾವಣೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ವೈದ್ಯರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. 

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರ ಮುಷ್ಕರ: ಇಂದು ಮಹತ್ವದ ಸಭೆ

ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ.


Click the Play button to hear this message in audio format

ಖಾಲಿ ಹುದ್ದೆಗಳ ಭರ್ತಿ, ವರ್ಗಾವಣೆ ನೀತಿ ಬದಲಾವಣೆ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕದ ಸರ್ಕಾರಿ ವೈದ್ಯರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ಮುಂದಿನ ನಡೆಯನ್ನು ಚರ್ಚಿಸಲು ಇಂದು ಮಹತ್ವದ ಸಭೆಯನ್ನು ಕರೆಯಲಾಗಿದೆ.

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ. ರವೀಂದ್ರನಾಥ್ ಎಂ. ಮೇಟಿ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಈ ಸಭೆ ನಡೆಯಲಿದೆ. ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ, ಮುಷ್ಕರದ ರೂಪುರೇಷೆಗಳು ಹಾಗೂ ತಮ್ಮ ಬೇಡಿಕೆಗಳ ಕುರಿತು ಸಂಘವು ಅಧಿಕೃತವಾಗಿ ಮಾಹಿತಿ ನೀಡುವ ನಿರೀಕ್ಷೆಯಿದೆ.

ಈಗಾಗಲೇ, ಸರ್ಕಾರಿ ವೈದ್ಯರ ಸಂಘವು ತಮ್ಮ ಮುಷ್ಕರದ ನಿರ್ಧಾರದ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮುನ್ಸೂಚನೆ ನೀಡಿದೆ. ಯೋಜನೆಯಂತೆ, ಮಾರ್ಚ್ 11 ರಿಂದ 15 ರವರೆಗೆ ಹೊರರೋಗಿಗಳ (ಒಪಿಡಿ) ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ವೈದ್ಯರು ತೀರ್ಮಾನಿಸಿದ್ದಾರೆ. ಬೇಡಿಕೆಗಳು ಈಡೇರದಿದ್ದಲ್ಲಿ, ಮಾರ್ಚ್ 16 ರಿಂದ ಎಲ್ಲಾ ವೈದ್ಯರು ಕೆಲಸಕ್ಕೆ ಗೈರುಹಾಜರಾಗುವ ಮೂಲಕ ಸಂಪೂರ್ಣ ಮುಷ್ಕರಕ್ಕಿಳಿಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆಯಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ.

Read More
Next Story